ಜೇವರ್ಗಿ: ರಾಜ್ಯ ವಿಧಅನಸಭೆ ಚುನವಾಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಸಬೆ, ಸಮಾವೇಶಗಳನ್ನು ಮಾಡುವ ಮೂಲಕ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ.
ಇನ್ನು ಶುಕ್ರವಾರ ಕಲಬುರ್ಗಿ ಜಿಲ್ಲೆಯ ಜೇರ್ವಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಜನರು ಮಳೆಯ ನಡುವೆ ಕಿಕ್ಕಿರಿದು ಸೇರಿದ್ದು ವಿಶೇಷವಾಗಿತ್ತು.
ಗುಡುಗು ಸಹಿತ ಮಳೆ
ಜಿಲ್ಲೆಯಲ್ಲಿ ಗುಡುಡು ಸಹಿತ ಭಾರಿ ಮಳೆಯಾಗುತ್ತಿದ್ದು ಇದರ ನಡುವೆಯೂ ಸಾವಿರಾರು ಜನರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಜೇವರ್ಗಿ ತಾಲ್ಲೂಕು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು.
ಭಾರಿ ಮಳೆಯ ನಡುವೆಯೂ ಕೂಡ ಸಮಾವೇಶಕ್ಕೆ ಆಗಮಿಸಿದ ರಾಹುಲ್ ಗಾಂಧಿ ಸಂಪೂರ್ಣ ವದ್ದೆಯಾಗಿದ್ದ ವೇದಿಕೆಯನ್ನು ಏರಿ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಿದ್ಧಾರೆ.
ನಿರಂತರ ಮಳೆಯ ನಡುವೆಯೂ ಭಾಷಣ ಮಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿಕಾರಿಕ್ಕೆ ಬಂದರೆ ಈಗಾಗಲೇ ಘೋಷಿಸಿರುವ ಗ್ಯಾರಂಟಿ ಕಾರ್ಡ್ಗಳನ್ನು ಜಾರಿಗೆ ತರಲಾಗುವುದು. ಇದಕ್ಕಾದರೂ ನೀವು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ವಿನಂತಿಸಿದ್ದಾರೆ.
ಇದನ್ನೂ ಒದಿ: ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಜಾಗ ಕೇಳಿದ ಕಾನೂನು ವಿವಿ
ಇದು ಒಳ್ಳೆಯ ಸಂಕೇತ
ಇನ್ನು ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಜಯ್ ಸಿಂಗ್ ಮಳೆ ಬರುತ್ತಿರುವುದು ಒಳ್ಳೆಯ ಸಂಕೇತವಾಗಿದ್ದು ಇದು ರೈತರಿಗೆ ಶುಭ ಸೂಚನೆಯಾಗಿದೆ. ಈ ಮೂಲಕ ರಾಜ್ಯವನ್ನು ಆಳಿದ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಒಂದು ದೊಡ್ಡ ವೇದಿಕೆಯಾಗಲಿದೆ ಎಂದು ಹೇಳಿದ್ದಾರೆ.