ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮಳೆಯಿಂದಾದ ಅನಾಹುತದಿಂದಾಗಿ ಸಾವಿನ ಸಂಖ್ಯೆ 100ಕ್ಕೆ ದಾಟಿದೆ ಎಂದು ವಿಪತ್ತು ನಿರ್ವಹಣಾ ಪಡೆ ನೀಡಿದ ವರದಿಯಲ್ಲಿ ತಿಳಿಸಲಾಗಿದೆ.
ಜೂನ್ 1 ರಿಂದ ಈವರೆಗೆ 102 ಮಂದಿ ಮೃತಪಟ್ಟಿದ್ದು, ನಿನ್ನೆ ಒಂದೇ ದಿನದಲ್ಲಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ. ಬುಲ್ಧಾನಾ, ನಾಸಿಕ್ ಮತ್ತು ನಂದುಬಾರ್ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭೂ ಕುಸಿತ, ಮರಗಳು ಉರುಳಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಳ್ಳಿಗಳಲ್ಲಿರುವ ಮನೆಗಳು ಸಹ ಕಾಣಿಸದಷ್ಟು ನೀರು ತುಂಬಿಕೊಂಡಿದೆ. ಈ ನಡುವೆ ಎನ್ಡಿಆರ್ಎಫ್ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುಲಾಗುತ್ತಿದೆ.
ಈ ನಡುವೆ ರಸ್ತೆ ಹಾಗೂ ರೈಲು ಸಂಚಾರಕ್ಕೂ ಅಡ್ಡಿಯಾಗಿದ್ದು, ಮಳೆಯಿಂದಾಗಿ ಕೆಲವೆಡೆ ಸಂಪೂರ್ಣ ರಸ್ತೆ ಸಂಚಾರ ಸ್ಥಗಿತಗೊಂಡಿದೆ.(ಏಜೆನ್ಸೀಸ್)
ಲಲಿತ್ ಮೋದಿ ಜತೆಗೆ ಸುಷ್ಮಿತಾ ಡೇಟಿಂಗ್: ಮಾಜಿ ಪ್ರಿಯಕರನಿಂದ ಅಚ್ಚರಿಯ ಹೇಳಿಕೆ!
ಇಂತಹ ರಸ್ತೆಗಳಲ್ಲೂ ಅಪಘಾತವಾಗುತ್ತಾ? ಸರ್ಕಾರ ನೀಡಿರುವ ವರದಿಯಲ್ಲಿದೆ ಬೆಚ್ಚಿಬೀಳಿಸುವ ಮಾಹಿತಿ