ಕರೊನಾ ತಡೆಗೆ ಬಿಗಿಕ್ರಮ ಕೈಗೊಂಡ ಸಿಎಂ; ವಿಡಿಯೋ ಕಾನ್ಫರೆನ್ಸ್​ ಮೂಲಕ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

blank

ಬೆಂಗಳೂರು: ಕೇರಳ, ಮಹಾರಾಷ್ಟ್ರಗಳಲ್ಲಿ ಕರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಗೂ ಗಡಿಭಾಗದ ಜಿಲ್ಲೆಗಳಲ್ಲೂ ಸೋಂಕು ಏರಿರುವುದರಿಂದ ಗಂಭೀರವಾಗಿ ಪರಿಗಣಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

blank

ವಿಶೇಷವಾಗಿ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಕೋವಿಡ್​ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಆಕ್ಸಿಜನ್ ಪೂರೈಕೆ, ಔಷಧಿ ಲಭ್ಯತೆ, ಮುನ್ನೆಚ್ಚರಿಕೆ ಕ್ರಮಗಳು, ಗಡಿ ಭಾಗಗಳಲ್ಲಿ ತಪಾಸಣೆ ಮೊದಲಾದ ವಿಷಯಗಳ ಕುರಿತು ವಿವರವಾಗಿ ಚರ್ಚೆ ನಡೆಸಿದರು. ಬಳಿಕ ಕೆಲವೊಂದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.

ಕರೊನಾ ನಿಯಂತ್ರಣಕ್ಕೆ ಸಿಎಂ ನೀಡಿದ ಸೂಚನೆಗಳು

  • ಕೋವಿಡ್ ಎರಡನೇ ಅಲೆಯನ್ನು ಕಠಿಣ ಪರಿಶ್ರಮದಿಂದ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ನಿಯಂತ್ರಿಸಲಾಗಿದೆ. ಈಗ ಮತ್ತೆ ಪ್ರಕರಣಗಳು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
  • ಅಂತರರಾಜ್ಯ ಗಡಿ ಚೆಕ್​​ಪೋಸ್ಟ್​​ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಇಲ್ಲಿ ಆರ್​​ಟಿಪಿಸಿಆರ್ ನೆಗೆಟಿವ್ ವರದಿ, ಎರಡೂ ಡೋಸ್ ವ್ಯಾಕ್ಸಿನ್ ಕಡ್ಡಾಯ.
  • ಗಡಿಭಾಗಗಳಲ್ಲಿ ಚೆಕ್​​ಪೋಸ್ಟ್ ಬಿಗಿ ಮಾಡಿ. ಹಿರಿಯ ಅಧಿಕಾರಿಗಳನ್ನು ನಿಯೋಜಿಸಿ. ಡಿವೈಎಸ್​ಪಿ, ಉಪ ವಿಭಾಗಾಧಿಕಾರಿ, ವೈದ್ಯರು ಮತ್ತು ಇತರ ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.
  • ಜಿಲ್ಲಾಧಿಕಾರಿಗಳು ಮತ್ತು ಎಸ್​​ಪಿ ಪ್ರತಿ ಎರಡು ದಿನಕ್ಕೊಮ್ಮೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಬೇಕು.
  • ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಿ.
  • ರೈಲು ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು, ಬಂದರುಗಳಲ್ಲಿಯೂ ಕಟ್ಟೆಚ್ಚರ ವಹಿಸಬೇಕು.
  • ಕೇರಳದಿಂದ ಶಿಕ್ಷಣ, ಉದ್ಯೋಗಕ್ಕೆಂದು ಪ್ರತಿದಿನ ಪ್ರಯಾಣಿಸುವವರಿಗೆ ಒಂದು ವಾರದ ಅವಧಿಗೆ ಪಾಸ್ ನೀಡುವ ವ್ಯವಸ್ಥೆ ಹಾಗೂ ಅವರಿಗೆ ಪ್ರತಿ ವಾರ ಪರೀಕ್ಷೆ ಮಾಡಿಕೊಳ್ಳುವುದು ಕಡ್ಡಾಯ ಮಾಡಿ. ಈ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು.
  • ಹೊರ ರಾಜ್ಯದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿಯೇ ಕ್ವಾರಂಟೈನ್ ಮಾಡುವಂತೆ ಸೂಚಿಸಿ.
  • ಚಿಕಿತ್ಸಾ ಸೌಲಭ್ಯದಲ್ಲಿ, ಆಮ್ಲಜನಕ-ಔಷಧ ಪೂರೈಕೆಯಲ್ಲಿ ಯಾವುದೇ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು.
  • ಆರೋಗ್ಯ ಸೌಲಭ್ಯಕ್ಕೆ ಅಗತ್ಯವಿರುವ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಿ. ಅವುಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು.
  • ಜಿಲ್ಲೆಗಳಿಗೆ ಹಂಚಿಕೆ ಮಾಡಿರುವ ಪಿಎಸ್ಎ ಘಟಕಗಳನ್ನು ತ್ವರಿತವಾಗಿ ಅಳವಡಿಸಬೇಕು.
  • ಪಿಎಸ್ಎ ಘಟಕಗಳಿಗೆ ಅಗತ್ಯ ಸಾಮರ್ಥ್ಯದ ವಿದ್ಯುತ್ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು.
  • ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಪಿಎಸ್ಎ ಘಟಕ ಒಂದು ವಾರದೊಳಗೆ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಬೇಕು.
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್​​ಟಿಪಿಸಿಆರ್​​ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಬೇಕು. ಪ್ರವಾಸಿಗರು ಹೆಚ್ಚಾಗಿ ಆಗಮಿಸುವ ಕಾರಣ, ಹೋಮ್​​ಸ್ಟೇ, ರೆಸಾರ್ಟ್​ಗಳಲ್ಲಿ ಪರೀಕ್ಷೆ ನಡೆಸಬೇಕು. ರೆಸಾರ್ಟ್​​ಗಳಲ್ಲಿ ಅತಿಥಿಗಳಿಗೆ ಆರ್​ಟಿಪಿಸಿಆರ್​ ವರದಿ ಕಡ್ಡಾಯಗೊಳಿಸಬೇಕು.
  • ಲಸಿಕೆ ಕಾರ್ಯಕ್ರಮವನ್ನು ಎಲ್ಲ ಜಿಲ್ಲಾಧಿಕಾರಿಗಳು ತೀವ್ರಗೊಳಿಸಬೇಕು.
  • ಸಂಪರ್ಕಿತರ ಪತ್ತೆ ತೀವ್ರಗೊಳಿಸಲು ಕ್ರಮಕೈಗೊಳ್ಳಬೇಕು.
  • ಗಡಿ ಪ್ರದೇಶದಲ್ಲಿ ಆರ್​ಎಟಿ ಪರೀಕ್ಷೆ ಹೆಚ್ಚಿಸಬೇಕು.
  • ಮೈಕ್ರೋ ಕಂಟೇನ್​​ಮೆಂಟ್​​ ಜೋನ್​ಗಳನ್ನು ಮಾಡಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
  • ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯಗೊಳಿಸಬೇಕು.
  • ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ನಿಗಾ ಇಡಬೇಕು.
Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…