ಬೆಂಗಳೂರು: ‘ಒಂದು ಮೊಟ್ಟೆಯ ಕಥೆ’ ಖ್ಯಾತಿಯ ರಾಜ್ ಬಿ ಶೆಟ್ಟಿ ಸಖತ್ ಬಿಜಿಯಾಗಿದ್ದಾರೆ. ಈಗಾಗಲೇ ಅವರು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಯ ಹನಿಯೇ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನೊಂದು ಕಡೆ, ಶಿವರಾಜಕುಮಾರ್ ಮತ್ತು ಉಪೇಂದ್ರ ಜತೆಯಾಗಿ ನಟಿಸುತ್ತಿರುವ ’45’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಳ್ಳುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಅವರು ಮಲಯಾಳಂಗೆ ಹೊರಟು ನಿಂತಿದ್ದಾರೆ.
ಇದನ್ನೂ ಓದಿ: ಅಪ್ಪು ಬಗ್ಗೆ ಜಾಸ್ತಿ ಮಾತನಾಡುವುದಿದೆ ಎಂದು ರಜನಿಕಾಂತ್ ಹೇಳಿದ್ದಿಷ್ಟು…
ಹೌದು, ಇದೇ ಮೊದಲ ಬಾರಿಗೆ ರಾಜ್ ಬಿ. ಶೆಟ್ಟಿ ಮಲಯಾಳಂ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಹೆಸರು ‘ರುಧಿರಂ’. ಹಾಗಂತ ಈ ಚಿತ್ರ ಕೇವಲ ಮಲಯಾಳಂಗಷ್ಟೇ ಸೀಮಿತವಲ್ಲ. ಮಲಯಾಳಂನಲ್ಲಿ ನಿರ್ಮಾಣವಾಗಿ ಕನ್ನಡ, ತೆಲುಗು ಮತ್ತು ತಮಿಳಿಗೂ ಡಬ್ ಆಗಿ, ಏಕಕಾಲಕ್ಕೆ ನಾಲ್ಕೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ಈ ಚಿತ್ರದಲ್ಲಿ ರಾಜ್ ಶೆಟ್ಟಿ ಜತೆಗೆ ಅಪರ್ಣಾ ಬಾಲಮುರಳಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ಜಿಶೋ ಲೋನ್ ಆಂಟೋನಿ ಬರೆದು ನಿರ್ದೇಶನ ಮಾಡಿದರೆ, ವಿ.ಎಸ್. ಲಾಲನ್ ನಿರ್ಮಾಣ ಮಾಡುತ್ತಿದ್ದಾರೆ. ರೈಸಿಂಗ್ ಸನ್ ಸ್ಟುಡಿಯೋಸ್ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ವಿಶೇಷವೆಂದರೆ, ಇದಕ್ಕೂ ಮೊದಲು ರಾಜ್ ಬಿ ಶೆಟ್ಟಿ ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಮಿಥುನ್ ಮುಕುಂದನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.
ಇದನ್ನೂ ಓದಿ: ದಂತಕಥೆಯನ್ನು ಮನರಂಜನೆಯ ಮೂಲಕ ಹೇಳಲಾಗಿದೆ; ಕಾಂತಾರ ಸಿನಿಮಾ ವೀಕ್ಷಿಸಿದ ರವಿಶಂಕರ್ ಗುರೂಜಿ
ಅಂದಹಾಗೆ, ಈ ಮೂರು ಚಿತ್ರಗಳಲ್ಲಿ ರಾಜ್ ಶೆಟ್ಟಿ ಮೊದಲು ಯಾವ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ? ಅವರ ಮುಂದಿನ ನಡೆ ಏನು? ಎಂಬುದರ ಬಗ್ಗೆ ಕುತೂಹಲವಿದೆ.