ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜಧಾನಿಯಲ್ಲಿ ಮಳೆ ನೀರು ಹರಿವಿಗೆ ತೊಡಕಾಗಿರುವ ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡುವ ಕಾರ್ಯಾಚರಣೆ ಮತ್ತೆ ಆರಂಭಿಸಲಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಳೆ ಅವಾಂತರದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಸಾವಿಗೀಡಾದ್ದರಿಂದ ಸೇಂಟ್​ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಈ ವಿಷಯ ತಿಳಿಸಿದರು. ಬೆಂಗಳೂರಿನ ಇನ್​ಫೊಸಿಸ್ ಉದ್ಯೋಗಿ, ಆಂಧ್ರಪ್ರದೇಶ ಮೂಲದ ಭಾನುರೇಖಾ (22) ತನ್ನ ಹೊಸ ಮನೆ ನೋಡಲು ಊರಿನಿಂದ ಬಂದಿದ್ದ ಕುಟುಂಬಸ್ಥರನ್ನು ಇಂದು ಬೆಂಗಳೂರು ವೀಕ್ಷಣೆಗಾಗಿ ಕ್ಯಾಬ್​ನಲ್ಲಿ ಕರೆದುಕೊಂಡು ಬಂದಿದ್ದರು. ಆಗ ಅವರಿದ್ದ ಕ್ಯಾಬ್​ ಕೆ.ಆರ್​. ರಸ್ತೆಯ … Continue reading ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ