ನವದೆಹಲಿ: ಅಮಾನತುಗೊಂಡ ಬಿಜೆಪಿ ಶಾಸಕ ರಾಜಾ ಸಿಂಗ್, “ಭಾರತೀಯ ಜನತಾ ಪಕ್ಷ ನನ್ನ ನರ-ನಾಡಿಗಳಲ್ಲಿ ಹರಿದಾಡುತ್ತಿದೆ. ನನ್ನ ಜೀವ ಇರುವವರೆಗೂ ಬಿಜೆಪಿ ಬಿಟ್ಟು ಬೇರೆ ಪಕ್ಷವನ್ನು ಸೇರುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ, ಆ್ಯಸಿಡ್ ಎರಚಿ ಹತ್ಯೆ
ತೆಲಂಗಾಣ ಆರೋಗ್ಯ ಸಚಿವ ಹರೀಶ್ ರಾವ್ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಜಾ ಸಿಂಗ್ ಭಾರತೀಯ ರಾಷ್ಟ್ರ ಸಮಿತಿಗೆ (BRS) ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳು ಹರಿದಾಡಿತು. ಈ ಊಹಾಪೋಹಗಳ ವಿರುದ್ಧ ಸಿಡಿದೆದ್ದ ಸಿಂಗ್, “ನನ್ನನ್ನು ಪಕ್ಷ ಅಮಾನತುಗೊಳಿಸಿದೆ. ಶೀಘ್ರವೇ ಇದನ್ನು ಹಿಂತೆಗೆದುಕೊಳ್ಳದಿದ್ದರೆ ಬಹುಶಃ ನಾನು ರಾಜಕೀಯದಿಂದ ವಿರಾಮ ತೆಗೆದುಕೊಳ್ಳುತ್ತೇನೆ ಹೊರತು ಬಿಜೆಪಿಯನ್ನು ತ್ಯಜಿಸುವುದಿಲ್ಲ” ಎಂದು ಹೇಳಿದರು.
“ನಾನು ಮಾಧ್ಯಮಗಳಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ಬಿಜೆಪಿ ನನ್ನ ನರ-ನಾಡಿಗಳಲ್ಲಿ ಹರಿದಾಡುತ್ತಿದೆ. ನನ್ನ ಕೊನೆಯುಸಿರಿನ ತನಕ ನಾನು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ಹಿಂದೂ ರಾಷ್ಟ್ರದ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ” ಎಂದು ವದಂತಿಗಳಿಗೆ ಸ್ಪಷ್ಟನೆ ನೀಡಿದರು,(ಏಜೆನ್ಸೀಸ್).
ಯಂಗ್ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?