ವ್ಯರ್ಥವಾಯ್ತು 57 ಗಂಟೆಗಳ ಶ್ರಮ: ಬಾಲಕನ ಜೀವ ಕಸಿದ ಕೊಳವೆ ಬಾವಿ, ಕೊನೆಗೂ ಫಲಿಸದ ಪ್ರಾರ್ಥನೆ | Borewell

Borewell

ರಾಜಸ್ಥಾನ: ಐದು ವರ್ಷದ ಆರ್ಯನ್ ಎಂಬ ಬಾಲಕ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 150 ಅಡಿ ಆಳದ ಕೊಳವೆ ಬಾವಿ ( Borewell )ಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ದೌಸಾ ಜಿಲ್ಲೆಯ ಕಲಿಖಂಡ್ ಎಂಬ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಬಾಲಕ ಆರ್ಯನ್ ಕೊಳವೆ ಬಾವಿಗೆ ಬಿದ್ದನು. ಆಟವಾಡಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿತು. ಇದಾದ ಒಂದು ಗಂಟೆಯ ನಂತರ ರಕ್ಷಣಾ ತಂಡಕ್ಕೆ ಮಾಹಿತಿ ದೊರೆಯಿತು. ಕೂಡಲೇ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್  ತಂಡಗಳು ಸ್ಥಳಕ್ಕೆ ಆಗಮಿಸಿದವು.

ಜೆಸಿಬಿಗಳು ಮತ್ತು ಡ್ರಿಲ್ಲಿಂಗ್ ಯಂತ್ರಗಳ ಸಹಾಯದಿಂದ ಕೊಳವೆ ಬಾವಿಗೆ ಸುತ್ತಲೂ ಮಣ್ಣನ್ನು ಅಗೆಯಲು ಆರಂಭಿಸಲಾಯಿತು. ಮತ್ತೊಂದೆಡೆ, ಪೈಪ್​ ಮೂಲಕ ಬಾಲಕನಿಗೆ ನಿರಂತರ ಆಮ್ಲಜನಕವನ್ನು ಪೂರೈಸಲಾಯಿತು. ಆದಾಗ್ಯೂ, ರಕ್ಷಣಾ ಕಾರ್ಯಾಚರಣೆಯು ಅನೇಕ ಸವಾಲುಗಳನ್ನು ಎದುರಿಸಿತು.

ಇದನ್ನೂ ಓದಿ: ನನ್ನ ಪ್ರಕಾರ ತಂಡದಲ್ಲಿರಲು ಆತ ಅರ್ಹನೇ ಅಲ್ಲ! ಅಚ್ಚರಿಯ ಹೇಳಿಕೆ ನೀಡಿದ​ ಡೇವಿಡ್​ ವಾರ್ನರ್​ | David Warner

ಕೊಳವೆ ಬಾವಿಯಲ್ಲಿ ನೀರಿನ ಮಟ್ಟ ಸುಮಾರು 160 ಅಡಿಯಲ್ಲಿ ಇರಬಹುದೆಂದು ಎನ್​ಡಿಆರ್​ಎಫ್​ ತಂಡ ಅಂದಾಜಿಸಿತು. ಅಲ್ಲದೆ, ಭೂಮಿ ಒಳಗಿನ ಹಬೆಯಿಂದಾಗಿ ಬಾಲಕನ ಚಲನವಲನಗಳನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯುವುದು ಕಷ್ಟವಾಗಿತ್ತು. ಅದೇ ಸಮಯದಲ್ಲಿ, ಸಾಕಷ್ಟು ಸುರಕ್ಷತಾ ಸಮಸ್ಯೆಗಳಿವೆ ಎಂದು ಅಧಿಕಾರಿಗಳು ಮನಗಂಡರು.

ಸುಮಾರು 57 ಗಂಟೆಗಳ ಪರಿಶ್ರಮದ ಬಳಿಕ 150 ಅಡಿ ಆಳದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಆರ್ಯನ್‌ನನ್ನು ಕೊಳವೆ ಬಾವಿಯಿಂದ ಸುರಕ್ಷಿತವಾಗಿ ಹೊರತೆಗೆಯಲಾಯಿತು. ಗ್ರೀನ್ ಕಾರಿಡಾರ್ ಮೂಲಕ ಅತ್ಯಾಧುನಿಕ ಲೈಫ್ ಸಪೋರ್ಟ್ ಸಿಸ್ಟಂ ಹೊಂದಿದ ಆಂಬುಲೆನ್ಸ್​ನಲ್ಲಿ ಆರ್ಯನ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಇದೀಗ ಆಕ್ರಂದನ ಮುಗಿಲು ಮುಟ್ಟಿದೆ. (ಏಜೆನ್ಸೀಸ್​)

ಮಾಜಿ ಪತಿ ನಾಗಚೈತನ್ಯ ಬೆನ್ನಲ್ಲೇ 2ನೇ ಮದುವೆಗೆ ರೆಡಿಯಾದ ಸಮಂತಾ! ಸುಳಿವು ಬಿಟ್ಟುಕೊಟ್ಟ ಸೌತ್​ ಬ್ಯೂಟಿ | Samantha

ಬೇಕರಿಗಳಲ್ಲಿ ಈ ಸ್ವೀಟ್​ಗಳನ್ನು ಖರೀದಿಸುವ ಮುನ್ನ ಎಚ್ಚರ! ಕ್ಯಾನ್ಸರ್​ ಕೂಡ ಬರಬಹುದು | Bakery Sweets

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…