More

    ಲಾರಿ-ಕಾರು ಡಿಕ್ಕಿ;  ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್​ ಆಗುತ್ತಿದ್ದವರು ಸೇರಿದ್ದು ಮಸಣಕ್ಕೆ

    ಜೈಪುರ: ಮದುವೆ ಮುಗಿಸಿ ಮನೆಗೆ ವಾಪಸ್​ ಬರುವಾಗ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ 9 ಮಂದಿ ಯುವಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಅಕ್ಲೇರಾ ಸಮೀಪದ ಪಂಚೋಲಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಜಯೊಬ್ಬರು, ಮಧ್ಯಪ್ರದೇಶದಲ್ಲಿ ಮದುವೆ ಕಾರ್ಯಕ್ರಮ ಮುಗಿಸ ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, 3 ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಪಘಾತದ ಸುದ್ದಿ ತಿಳಿದ ತಕ್ಷಣ ಮದುವೆಯ ಸಂತೋಷವೂ ಶೋಕಕ್ಕೆ ತಿರುಗಿತ್ತು. ಅಪಘಾತದ ಸುದ್ದಿ ತಿಳಿದ ನಂತರ ವಧು-ವರರ ಮನೆಯಲ್ಲಿ ಗದ್ದಲ ಉಂಟಾಯಿತು. ಮದುವೆಗೆ ಬಂದವರೆಲ್ಲರೂ ತಮ್ಮ ಕೆಲಸ ಬಿಟ್ಟು ಘಟನಾ ಸ್ಥಳದ ಕಡೆಗೆ ಓಡಿದರು. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts