ಉದಯಪುರ: ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆಯಾದ ಟೈಲರ್ ಕನ್ಹಯ್ಯ ಲಾಲ್ ಅವರ ಮನೆಗೆ ತೆರಳಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.
ಉದಯಪುರದಲ್ಲಿರುವ ಕನ್ಹಯ್ಯಲಾಲ್ ಮನೆಗೆ ಗುರುವಾರ ಭೇಟಿ ನೀಡಿದ ಸಿಎಂ ಗೆಹ್ಲೋಟ್, ಕುಟುಂಬಸ್ಥರಿಗೆ 51 ಲಕ್ಷ ರೂ.ಚೆಕ್ ನೀಡಿದರು.
#WATCH | Rajasthan CM Ashok Gehlot meets the family members of #KanhaiyaLal, who was killed by two men on June 28 in Udaipur pic.twitter.com/rQzra6Wqpd
— ANI MP/CG/Rajasthan (@ANI_MP_CG_RJ) June 30, 2022
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ಈ ಪ್ರಕರಣವನ್ನು ಎನ್ಐಎ ತನಿಖೆಗೊಳಪಡಿಸಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಲಾಗುವುದು, ಹಂತಕರಿಗೆ ಕಠಿಣ ಶಿಕ್ಷೆಯಾಗುವುದು ಖಚಿತ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಗೆಹ್ಲೋಟ್ ಮಾತ್ರವಲ್ಲದೇ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಕನ್ಹಯ್ಯ ಲಾಲ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತ್ತಿದ್ದು, ಕೆಲವು ಸಂಘ-ಸಂಸ್ಥೆಗಳಿಂದಲೂ ಪರಿಹಾರ ಧನ ನೀಡಲಾಗಿದೆ. (ಏಜೆನ್ಸೀಸ್)
ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ: ಸಾವಿರಾರು ಜನರು ಭಾಗಿ