ಜೈಪುರ: ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಹಾಗೂ ಅವರ ಪುತ್ರ ದುಶ್ಯನ್ ಸಿಂಗ್ ಕ್ವಾರಂಟೈನ್ನಲ್ಲಿ ಉಳಿಯುವುದಾಗಿ ತಿಳಿಸಿದ್ದಾರೆ.
ಗಾಯಕಿ ಕನಿಕಾ ಕಪೂರ್ ಅವರು ನೀಡಿದ ಪಾರ್ಟಿಯಲ್ಲಿ ವಸುಂಧರಾ ರಾಜೆ ಹಾಗೂ ಅವರ ಪುತ್ರ ದುಶ್ಯನ್ ಸಿಂಗ್ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.
ಗಾಯಕಿ ಕನಿಕಾ ಕಪೂರ್ ಅವರಿಗೆ ಕರೊನಾ ವೈರಸ್ ಸೋಂಕು ಹರಡಿರುವುದು ದೃಢವಾಗುತ್ತಿದ್ದಂತೆ ರಾಜೆ ಹಾಗೂ ಅವರ ಪುತ್ರ ಪ್ರತ್ಯೇಕವಾಗಿ ಇರುವುದಾಗಿ ತಿಳಿಸಿದ್ದಾರೆ.
ಲಕ್ನೋದಲ್ಲಿ ನಡೆದ ಔತಣಕೂಟದಲ್ಲಿ ನಾನು, ನನ್ನಪುತ್ರ ಹಾಗೂ ಅಳಿಯನೊಂದಿಗೆ ಪಾಲ್ಗೊಂಡಿದ್ದೆ. ಈ ವೇಳೆ ಸೋಂಕು ಹರಡಿರಬಹುದು ಎಂದು ಅನಿಸುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಗಾಯಕಿ ಕನಿಕಾ ಕಪೂರ್ ಅವರು, ಲಂಡನ್ಗೆ ತೆರಳಿದ್ದರು. ಮಾ.15ರಂದು ಅವರು ರಾಷ್ಟ್ರಕ್ಕೆ ಆಗಮಿಸಿದ್ದರು. ಅವರು ಲಂಡನ್ನಿಂದ ಬಂದಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸದೆ ಮುಚ್ಚಿಟ್ಟಿದ್ದರು. ಅಲ್ಲದೆ ಅವರು ಔತಣಕೂಟ ಏರ್ಪಡಿಸಿದ್ದರು ಎಂದು ತಿಳಿದು ಬಂದಿದೆ.
ರಾಜಸ್ತಾನದಲ್ಲಿ ರಾಜೆ ಹಾಗೂ ಅವರ ಪುತ್ರನೊಂದಿಗೆ ಸಂಪರ್ಕಕ್ಕೆ ಬಂದವರ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್)
ಕರೊನಾ ವೈರಸ್ ಸೋಂಕು ಹರಡುವಿಕೆ ತಪ್ಪಿಸಲು ಶೃಂಗೇರಿ ಶ್ರೀ ಶಾರದಾ ದೇವಿ ದರ್ಶನ ತಾತ್ಕಾಲಿಕ ರದ್ದು