More

    ರಾಜಸ್ಥಾನ ಹಗ್ಗಜಗ್ಗಾಟಕ್ಕೆ ತೆರೆ; ಆಗಸ್ಟ್​ 14ರಿಂದ ಅಧಿವೇಶನ ನಡೆಸಲು ರಾಜ್ಯಪಾಲರ ಅನುಮತಿ

    ಜೈಪುರ: ಭಾರಿ ಹಗ್ಗಜಗ್ಗಾಟದ ಬಳಿಕ ರಾಜಸ್ಥಾನ ರಾಜ್ಯಪಾಲ ಕಲ್ರಾಜ್​ ಮಿಶ್ರಾ ರಾಜಸ್ಥಾನ ವಿಧಾನಸಭೆ ಅಧಿವೇಶನ ನಡೆಸಲು ಸಿಎಂ ಅಶೋಕ್​ ಗೆಹ್ಲೋಟ್​ಗೆ ಅನುಮತಿ ನೀಡಿದ್ದಾರೆ.

    ಬುಧವಾರವೂ (ಜುಲೈ 29) ಸಿಎಂ ಅಶೋಕ್​ ಗೆಹ್ಲೋಟ್​ ಕಲಾಪ ನಡೆಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಅಂತಿಮವಾಗಿ ಆಗಸ್ಟ್​ 14ರಿಂದ ಅಧಿವೇಶನ ನಡೆಸಲು ಹಸಿರು ನಿಶಾನೆ ತೋರಿದ್ದಾರೆ.

    ಎರಡು ದಿನಗಳ ಹಿಂದಷ್ಟೇ ಕಲಾಪಕ್ಕೆ ಸಮ್ಮತಿ ಸೂಚಿಸಿದ್ದ ರಾಜ್ಯಪಾಲರು ಮೂರು ಷರತ್ತುಗಳನ್ನು ವಿಧಿಸಿದ್ದರು. ಅಧಿವೇಶನಕ್ಕೆ 21 ಮುನ್ನ ಶಾಸಕರಿಗೆ ನೋಟಿಸ್​ ನೀಡಿ. ಕಲಾಪದ ವೇಳೆ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಿ, ವಿಶ್ವಾಸ ಮತ ಯಾಚಿಸುವುದಾರೆ ಕಲಾಪದ ನೇರ ಪ್ರಸಾರ ನಡೆಸಿ ಎಂದು ಸೂಚಿಸಿದ್ದರು.

    ಇದನ್ನೂ ಓದಿ; ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ 

    ಸಿಎಂ ಸಲ್ಲಿಸಿದ್ದ ಪರಿಷ್ಕೃತ ಪ್ರಸ್ತಾವನೆಯಲ್ಲಿ ವಿಶ್ವಾಸ ಮತ ಯಾಚನೆಯ ಪ್ರಸ್ತಾವನೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡುವಂತೆ ಸಿಎಂಗೆ ಮತ್ತೊಮ್ಮೆ ರಾಜ್ಯಪಾಲರು ಸೂಚಿಸಿದ್ದರು. ಹೀಗಾಗಿ ಆಗಸ್ಟ್​ 14ರಿಂದ ಕಲಾಪ ನಡೆಸಲು ಅನುಮತಿ ನೀಡುವಂತೆ ಕೋರಿ ಸಿಎಂ ಮೂರನೇ ಬಾರಿಗೆ ಪ್ರಸ್ತಾವನೆ ಕಳುಹಿಸಿದ್ದರು.

    ಈ ನಡುವೆ, ಸಚಿನ್​ ಪೈಲಟ್​ ಹಾಗೂ ಅವರ ಬೆಂಬಲಿಗರ ಶಾಸಕರ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿರುವ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸ್ಪೀಕರ್​ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

    ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts