ಜೈಪುರ: ತೆರಳಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜಸ್ಥಾನದ ಸಚಿವ ಮಹೇಶ್ ಜೋಶಿ ಅವರ ಪುತ್ರನನ್ನು ಬಂಧಿಸಲು ದೆಹಲಿ ಪೊಲೀಸರ ತಂಡ ಭಾನುವಾರ ಜೈಪುರಕ್ಕೆ ಬಂದಿಳಿದಿದೆ.
ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯಲು ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಿದ್ದರು. ಭಾನುವಾರ ಮುಂಜಾನೆ ಸಚಿವರ ನಿವಾಸಕ್ಕೆ ತೆರಳಿ ಹುಡುಕಾಟ ನಡೆಸಿದ್ದಾರೆ. ಅಲ್ಲಿಂದಲೂ ರೋಹಿತ್ ಜೋಶಿ ಪರಾರಿಯಾಗಿದ್ದಾನೆ.
23 ವರ್ಷದ ಯುವತಿಯು ಸಚಿವರ ಪುತ್ರ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ, ಕಳೆದ ವರ್ಷ ಜನವರಿ 8 ರಿಂದ ಈ ವರ್ಷದ ಏಪ್ರಿಲ್ 17ರವರೆಗೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸದರ್ಬಜಾರ್ ಠಾಣೆಯಲ್ಲಿ ದೂರು ನೀಡಿದ್ದಳು.
ಫೇಸ್ಬುಕ್ನಿಂದ ನಮ್ಮಿಬ್ಬರ ಪರಿಚಯವಾಯಿತು. ನಂತರ ನಿರಂತರ ಸಂಪರ್ಕದಲ್ಲಿದ್ದೆವು, ನಮ್ಮ ಸ್ನೇಹ ಪ್ರೀತಿಗೆ ತಿರುಗಿತು, ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ ಎಂದು ಕೂಡ ಯುವತಿ ಹೇಳಿದ್ದಾಳೆ.ಇನ್ನು ಅವರ ತಂದೆ ಕೂಡ ತನಗೆ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಸಚಿವರ ವಿರುದ್ಧವೂ ಯುವತಿ ಆರೋಪಿಸಿದ್ದಾಳೆ. (ಏಜೆನ್ಸೀಸ್)