ರಾಜಸ್ಥಾನ: ಮಹಾಶಿವರಾತ್ರಿ ದಿನದಂದು ನಡೆದ ಅದ್ಧೂರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನ ಕೋಟಾದ ಕುನ್ಹಾಡಿ ಥರ್ಮಲ್ ಚೌರಾ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕೇದಾರನಾಥ ದರ್ಶನಕ್ಕೆ ದಿನಾಂಕ ನಿಗದಿ: ಈ ದಿನದಿಂದ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಆರಂಭ!
ಗಂಭೀರ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
#WATCH | Rajasthan: Several children were electrocuted during a procession on the occasion of Mahashivratri, in Kota. Further details awaited. pic.twitter.com/F5srBhO9kz
— ANI (@ANI) March 8, 2024
ಆಸ್ಪತ್ರೆಯ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಪೋಷಕರು ತಮ್ಮ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ವೈದ್ಯರ ಬಳಿ ಧಾವಿಸುತ್ತಿರುವುದನ್ನು ತೋರಿಸುತ್ತದೆ. ಸದ್ಯಕ್ಕೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಧಾವಿಸಿದ್ದಾರೆ.
ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ 14 ಮಕ್ಕಳ ಷೋಕರು ರೋದನೆ ಮುಗಿಲು ಮುಟ್ಟಿದೆ. ಇನ್ನೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಪೋಷಕರಿಗೆ ಸಾಂತ್ವನ ಹೇಳಲು ಜನಪ್ರತಿನಿಧಗಳು, ರಾಜಕಾರಣಿಗಳು ಸಂಘ ಸಂಸ್ಥೆ ಮುಖಂಡರು ಅಧಿಕಾರಿಗಳು ಸ್ಥಳಕ್ಕೆ ಬಂದು ಹೋಗುತ್ತಿದ್ದಾರೆ.