More

    ಪ್ರಾಣ ಹೋದರೂ ಕುಡಿಯುವ ನೀರಿನ ಯೋಜನೆ ಕಾಮಗಾರಿಯಿಂದ ಹಿಂದೆ ಸರಿಯುವುದಿಲ್ಲ ಎಂದ ಶಾಸಕ ಭೀಮಾ ನಾಯಕ್​

    ಬಳ್ಳಾರಿ: ಪ್ರಾಣ ಹೋದರೂ ಸರಿಯೇ ರಾಜವಾಳ ಗ್ರಾಮದಲ್ಲಿ ಜಾಕ್​ ವಾಲ್​ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ಭೀಮಾ ನಾಯಕ್​ ಗ್ರಾಮಸ್ಥರಿಗೆ ಹೇಳಿದ್ದಾರೆ.

    ಹಗರಿಬೊಮ್ಮನಹಳ್ಳಿ ಜನರಿಗೆ ಕುಡಿಯುವ ನೀರಿನ ಯೊಜನೆ ಜಾರಿಗೆ ತರಲು ಮಾಲವಿ ಜಲಾಶಯಕ್ಕೆ ಜಾಕ್​ವಾಲ್​ ನಿರ್ಮಿಸುವ ವಿಚಾರದಲ್ಲಿ ಹೂವಿನ ಹಡಗಲಿ ತಾಲೂಕಿನ ರಾಜವಾಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಾಕ್​ ವಾಲ್​ ನಿರ್ಮಾಣ ಮಾಡಿಯೇ ತೀರುತ್ತೇನೆ ಎಂದು ಹೇಳಿದರು.

    ಕಾಮಗಾರಿ ನಡೆಯುವ ಸ್ಥಳದಲ್ಲಿ ರುದ್ರಭೂಮಿ ಇರುವುದರಿಂದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಬೇರೆ ಜಾಗದಲ್ಲಿ ನಿರ್ಮಿಸುವಂತೆ ಕೋರಿದರು.

    ಈ ಯೋಜನೆ ನನ್ನ ಕ್ಷೇತ್ರದ ಅಳಿವು-ಉಳಿವು ಪ್ರಶ್ನೆಯಾಗಿದೆ. ಯೋಜನೆ ಜಾರಿಯಾದರೆ ಅಂತರ್ಜಲ ಮಟ್ಟ ಹೆಚ್ಚುತ್ತದೆ. ಲಕ್ಷ ಮಂದಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ. ಹೀಗಾಗಿ ಯೋಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅಡ್ಡಿಪಡಿಸಬೇಡಿ ಎಂದು ಗ್ರಾಮಸ್ಥರಿಗೆ ಅವರು ಮನವಿ ಮಾಡಿದರು. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts