ಬಳ್ಳಾರಿ: ಪ್ರಾಣ ಹೋದರೂ ಸರಿಯೇ ರಾಜವಾಳ ಗ್ರಾಮದಲ್ಲಿ ಜಾಕ್ ವಾಲ್ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ಭೀಮಾ ನಾಯಕ್ ಗ್ರಾಮಸ್ಥರಿಗೆ ಹೇಳಿದ್ದಾರೆ.
ಹಗರಿಬೊಮ್ಮನಹಳ್ಳಿ ಜನರಿಗೆ ಕುಡಿಯುವ ನೀರಿನ ಯೊಜನೆ ಜಾರಿಗೆ ತರಲು ಮಾಲವಿ ಜಲಾಶಯಕ್ಕೆ ಜಾಕ್ವಾಲ್ ನಿರ್ಮಿಸುವ ವಿಚಾರದಲ್ಲಿ ಹೂವಿನ ಹಡಗಲಿ ತಾಲೂಕಿನ ರಾಜವಾಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಜಾಕ್ ವಾಲ್ ನಿರ್ಮಾಣ ಮಾಡಿಯೇ ತೀರುತ್ತೇನೆ ಎಂದು ಹೇಳಿದರು.
ಕಾಮಗಾರಿ ನಡೆಯುವ ಸ್ಥಳದಲ್ಲಿ ರುದ್ರಭೂಮಿ ಇರುವುದರಿಂದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಬೇರೆ ಜಾಗದಲ್ಲಿ ನಿರ್ಮಿಸುವಂತೆ ಕೋರಿದರು.
ಈ ಯೋಜನೆ ನನ್ನ ಕ್ಷೇತ್ರದ ಅಳಿವು-ಉಳಿವು ಪ್ರಶ್ನೆಯಾಗಿದೆ. ಯೋಜನೆ ಜಾರಿಯಾದರೆ ಅಂತರ್ಜಲ ಮಟ್ಟ ಹೆಚ್ಚುತ್ತದೆ. ಲಕ್ಷ ಮಂದಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ. ಹೀಗಾಗಿ ಯೋಜನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅಡ್ಡಿಪಡಿಸಬೇಡಿ ಎಂದು ಗ್ರಾಮಸ್ಥರಿಗೆ ಅವರು ಮನವಿ ಮಾಡಿದರು. (ದಿಗ್ವಿಜಯ ನ್ಯೂಸ್)