ಬೆಂಗಳೂರು: ಹಿರಿಯ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.
ಸದ್ಯ ಈಗ ನಾವೇನು ಅಷ್ಟೋ ಇಷ್ಟೋ ಹಾಡುತ್ತಿದ್ದೆವೆಯೋ ಅದು ಎಸ್ಪಿಬಿ ಅವರು ಹಾಕಿದ ಭಿಕ್ಷೆ ಎಂದಿದ್ದಾರೆ. ಇಂಥ ಮತ್ತೊಂದು ಗಾಯಕ ಹುಟ್ಟಿ ಬರಬೇಕೆಂದರೆ ಇನ್ನೂ 500 ವರ್ಷ ಬೇಕು. ಅಂಥದ್ದೊಂದು ಮೇರು ಪರ್ವತವನ್ನು ನಾವಿಂದು ಕಳೆದುಕೊಂಡಿದ್ದೇವೆ’ ಎಂದು ಭಾವುಕರಾಗಿ ಮಾತನಾಡಿದ್ದಾರೆ.
ಇದನ್ನೂ ಓದಿ: ಅಮಿತಾಭ್ಗೆ ಧ್ವನಿ ನೀಡುವುದಕ್ಕೆ ಎಸ್ಪಿಬಿಗೆ ಕೊನೆಯವರೆಗೂ ಸಾಧ್ಯವಾಗಲೇ ಇಲ್ಲ …
ಶಾಲೆ ಮತ್ತು ಕಾಲೇಜಿನ ಸಮಯದಿಂದಲೇ ಅವರ ಹಾಡುಗಳನ್ನು ಕೇಳಿ ಅಭಿಮಾನಿಯಾಗಿದ್ದ ರಾಜೇಶ್ ಕೃಷ್ಣನ್, ಮುಂದೊಂದು ದಿನ ಅವರ ಜತೆ ವೇದಿಕೆ ಹಂಚಿಕೊಳ್ಳುವ ಸೌಭಾಗ್ಯ ಸಿಗುತ್ತಾ ಎಂದು ಭಾವಿಸಿರಲಿಲ್ಲ. ಆ ಗಳಿಗೆಯೂ ರಾಜೇಶ್ಗೆ ಸಿಕ್ಕಿತ್ತು.
ಇದೀಗ ಅವರೊಂದಿಗೆ ಕಳೆದ ಆ ಸಮಯವನ್ನು ಮತ್ತು ಬಿಟ್ಟು ಹೋದ ಹಾಡುಗಳನ್ನೇ ಕೇಳುತ್ತ ಅವರ ನೆನಪು ಮಾಡಿಕೊಳ್ಳುತ್ತಾರೆಂತೆ.