More

    ಏಕದಿನ ವಿಶ್ವಕಪ್​ ಫಿನಾಲೆ; ಟೀಂ ಇಂಡಿಯಾ ಗೆಲುವು ಫಿಕ್ಸ್​ ಎಂದು ಭವಿಷ್ಯ ನುಡಿದ ರಜಿನಿಕಾಂತ್

    ಚೆನ್ನೈ: ಹಾಲಿ ನಡೆಯುತ್ತಿರುವ ವಿಶ್ವಕಪ್​ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಹೊರಹಮ್ಮಿರುವ ಟೀಂ ಇಂಡಿಯಾ ಅಜೇಯವಾಗಿ ಫೈನಲ್​ ಪ್ರವೇಶಿಸಿದ್ದು, ಕಪ್​ ಗೆಲ್ಲುವ ಹಾಟ್​ ಫೇವರಿಟ್​ ತಂಡಗಳಲ್ಲಿ ಒಂದಾಗಿದೆ. ಇತ್ತ ದೇಶಾದ್ಯಂತ ಟೀಂ ಇಂಡಿಯಾ ಫಿನಾಲೆ ಪ್ರವೇಶಿಸುತ್ತಿದ್ದಂತೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಸೆಲೆಬ್ರಿಟಿಗಳು ಸಹ ವಿಶ್​ ಮಾಡಿದ್ದಾರೆ.

    ಬುಧವರಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಮೊದಲ ಸೆಮಿಫಿನಾಲೆ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್​ ತಂಡವನ್ನು ಮಣಿಸಿ ಫಿನಾಲೆಗೆ ಲಗ್ಗೆ ಇಟ್ಟಿತ್ತು. ಈ ಪಂದ್ಯಕ್ಕೆ ಬಾಲಿವುಡ್​ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಸಾಕ್ಷಿಯಾಗಿದ್ದರು. ಇದರಲ್ಲಿ ಮುಖ್ಯವಾಗಿ ಸೂಪರ್​ಸ್ಟಾರ್​ ರಜಿನಿಕಾಂತ್​ ಅವರು ಸಹ ಭಾರತದ ಗೆಲುವನ್ನು ಸಂಭ್ರಮಿಸಿದ್ದು, ಮತ್ತಷ್ಟು ವಿಶೇಷವಾಗಿತ್ತು.

    ಇದನ್ನೂ ಓದಿ: ಹಿಟ್​ಮ್ಯಾನ್​ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಸರಿಗಟ್ಟಿದ್ದ ಡೇವಿಡ್​ ವಾರ್ನರ್

    ಇದೀಗ ಫೈನಲ್​ನಲ್ಲಿ ಏನಾಗಲಿದೆ ಎಂದು ರಜನಿಕಾಂತ್​ ಭವಿಷ್ಯ ನುಡಿದಿದ್ದಾರೆ. ಪಂದ್ಯ ಮುಗಿಸಿ ಚೆನ್ನೈಗೆ ಮರಳಿದ ಬಳಿಕ ಮಾಧ್ಯಮಗಳ ಜೊತೆ ರಜನಿಕಾಂತ್​ ಮಾತನಾಡಿರುವ ಅವರು ಟೀಂ ಇಂಡಿಯಾ ಗೆಲುವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

    ಮೊದಲಿಗೆ ನನಗೆ ನರ್ವಸ್​ ಆಗಿತ್ತು. ಒಂದೂವರೆ ಗಂಟೆಗಳ ಕಾಲ ನರ್ವಸ್​ ಆಗಿದ್ದೆ. ನಂತರ ನ್ಯೂಜಿಲೆಂಡ್​ ವಿಕೆಟ್​ ಪತನವಾಗಲು ಆರಂಭಿಸಿದಾಗ ಎಲ್ಲವೂ ಸರಿ ಆಯಿತು. ನನಗೆ ಶೇಕಡ ನೂರರಷ್ಟು ಭರವಸೆ ಇದೆ. ಟೀಂ ಇಂಡಿಯಾ​ ನಿಜಕ್ಕೂ ಪ್ರಬಲವಾಗಿದೆ. ಬ್ಯಾಟಿಂಗ್​, ಬೌಲಿಂಗ್​, ಫೀಲ್ಡಿಂಗ್​ ಎಲ್ಲ ವಿಭಾಗದಲ್ಲೂ ಸರಿಸಾಟಿಯಿಲ್ಲದ ಪರ್ಫಾರ್ಮೆನ್ಸ್​ ನೀಡುತ್ತಿದ್ದಾರೆ. ಇದರಿಂದ ಕ್ರಿಕೆಟ್​ ಪ್ರೇಮಿಗಳಿಗೆ ಟೀಮ್​ ಇಂಡಿಯಾ ಮೇಲೆ ನೂರಕ್ಕೆ ನೂರರಷ್ಟು ಭರವಸೆ ಮೂಡಿದೆ. ಆಸ್ಟ್ರೇಲಿಯಾ ಕೂಡ ಪ್ರಬಲ ತಂಡವೇ ಆಗಿದ್ದರೂ ಇಂಡಿಯಾಗೆ ಜಯ ಖಚಿತ ಎಂದು ನಿರೀಕ್ಷೆ ಇಡಲಾಗಿದೆ ಎಂದು ಸೂಪರ್​ಸ್ಟಾರ್​ ರಜಿನಿಕಾಂತ್​ ಹೇಳಿದ್ದಾರೆ.

    ಭಾನುವಾರ (ನವೆಂಬರ್ 19) ಅಹಮದಾಬಾದಿನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಫೈನಲ್​ ಪಂದ್ಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರ ದಂಡೇ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts