More

    ರಾಜಕೀಯಕ್ಕೆ ಗುಡ್​ ಬೈ ಹೇಳಿದ ಬಾಕ್ಸರ್ ವಿಜೇಂದರ್ ಸಿಂಗ್; ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಶಾಕ್

    ನವದೆಹಲಿ: ಒಲಿಂಪಿಕ್​ ಚಿನ್ನದ ಪದಕ ವಿಜೇತ ವಿಜೇಂದರ್​ ಸಿಂಗ್​ ರಾಜಕೀಯ ತೊರೆಯುವುದಾಗಿ ಘೋಷಿಸಿದ್ದಾರೆ. 2019ರಲ್ಲಿ ವಿಜೇಂದರ್​ ಸಿಂಗ್​ ಕಾಂಗ್ರೆಸ್​ ಸೇರಿದ ಅವರ ಈ ದಿಢೀರ್​ ನಿರ್ಧಾರ ಹಲವರಲ್ಲಿ ಅಚ್ಚರಿ ಮೂಡಿಸಿದೆ.

    ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿನ ಬೆನ್ನಲ್ಲೇ ಅವರು ರಾಜಕೀಯ ತೊರೆಯುತ್ತಿರುವುದಾಗಿ ಘೋಷಿಸಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜೇಂದರ್​ ರಾಜನೀತಿ ಕೋ ರಾಮ್ ರಾಮ್ ಭಾಯಿ ಎಂದು ಹೇಳುವ ಮೂಲಕ ರಾಜಕೀಯ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಕಳೆದ ಕೆಲ ತಿಂಗಳುಗಳಿಂದ ರಾಜಕೀಯದಿಂದ ದೂರ ಉಳಿದಿದ್ದ ವಿಜೇಂದರ್​ ಸಿಂಗ್​ ಕೊನೆಯದಾಗಿ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್​ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದರು. ನವದೆಹಲಿಯಲ್ಲಿ ನಡೆದ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ವಿಜೇಂದರ್​ ಭಾಗಿಯಾಗಿ ಬಿಜೆಪಿ ಸಂಸದ ಬ್ರಿಜ್​​ ಭೂಷಣ್​ ವಿರುದ್ಧ ಹರಿಹಾಯ್ದಿದ್ದರು.

    ಇದನ್ನೂ ಓದಿ: ಜೀಪ್​-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು

    ನನ್ನ 20 ವರ್ಷಗಳ ಬಾಕ್ಸಿಂಗ್​ ಕೆರಿಯರ್​ನಲ್ಲಿ ನಾನು ನನ್ನ ದೇಶವನ್ನು ಹೆಮ್ಮೆಪಡುವಂತ ಕೆಲಸ ಮಾಡಿದ್ದೇನೆ. ಈಗ ನನ್ನ ದೇಶವಾಸಿಗಳಿಗಾಗಿ ಏನನ್ನಾದರೂ ಮಾಡಲು ಮತ್ತು ಅವರ ಸೇವೆ ಮಾಡುವ ಸಮಯ ಬಂದಿದೆ. ನಾನು ಈ ಅವಕಾಶವನ್ನು ಸ್ವೀಕರಿಸಲು ಬಯಸುತ್ತೇನೆ ಎಂದು 2019ರಲ್ಲಿ ಕಾಂಗ್ರೆಸ್​ ಸೇರುವ ವೇಳೆ ಹೇಳಿದ್ದರು.

    2019 ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಬಾಕ್ಸರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಸೋಲುಂಡಿದ್ದರು. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಅವರು ರಾಜಕೀಯಕ್ಕೆ ಗುಡ್​ಬೈ ಹೇಳಿರುವುದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts