More

    ಇನ್ನೊಂದು ಪ್ಯಾನ್​ ಇಂಡಿಯಾ ಚಿತ್ರದಲ್ಲಿ ರಾಮ್​ಚರಣ್ ತೇಜ

    ಹೈದರಾಬಾದ್​: ರಾಮ್​ಚರಣ್​ ತೇಜ ಪ್ಯಾನ್​ ಇಂಡಿಯಾ ನಟರಾಗಿಬಿಟ್ಟಿದ್ದಾರೆ. ಈಗಾಗಲೇ ಅವರ ‘ಆರ್​ಆರ್​ಆರ್’ ಚಿತ್ರವು ದೊಡ್ಡ ಸಕ್ಸಸ್​ ಕಂಡಿದೆ. ಅದರ ನಂತರ ಶಂಕರ್​ ಅಭಿನಯದ ಹೊಸ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಇನ್ನೊಂದು ಪ್ಯಾನ್​ ಇಂಡಿಯಾ ಚಿತ್ರವನ್ನು ರಾಮ್​ಚರಣ್​ ಒಪ್ಪಿಕೊಂಡಿದ್ದಾರೆ.

    ಇದನ್ನೂ ಓದಿ: ‘ಕಾಳಿ’ಗೆ ಬಂದರು ಸಪ್ತಮಿ ಗೌಡು; ಜನವರಿಯಿಂದ ಚಿತ್ರೀಕರಣ ಪ್ರಾರಂಭ

    ಇಂದು ರಾಮ್​ಚರಣ್​ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್​ ಇಂಡಿಯಾ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ. ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಆದ ‘ಉಪ್ಪೆನಾ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ, ಈಗ ರಾಮ್​ ಚರಣ್​ ಅವರನ್ನು ಈ ಹೊಸ ಚಿತ್ರದಲ್ಲಿ ನಿರ್ದೇಶಿಸಲಿದ್ದಾರೆ. ಪ್ಯಾನ್​ ಇಂಡಿಯಾಗೆ ಆಗುವ ಚಿತ್ರಕಥೆಯೊಂದನ್ನು ಬುಚ್ಚಿ ಬಾಬು ಸಿದ್ಧಪಡಿಸಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕೆ ರಾಮ್​ ಚರಣ್​ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ.

    ಮೈತ್ರಿ ಮೂವಿ ಮೇಕರ್ಸ್ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ.

    ಇದನ್ನೂ ಓದಿ: ರಾಣ ಅಬ್ಬರಿಸಲಿಲ್ಲ; ದಿಲ್​ ಪಸಂದ್​ ರುಚಿಸಲಿಲ್ಲ … ನವೆಂಬರ್​ ಚಿತ್ರಗಳ ಹಣೆಬರಹ ಇದು

    ಸದ್ಯ ಶಂಕರ್​ ನಿರ್ದೇಶನದ ಪ್ಯಾನ್​ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್​ಚರಣ್​ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ.

    ನಾವು ಯಾರು ಅವರ ಬಗ್ಗೆ ಕಾಮೆಂಟ್​ ಮಾಡುವುದಕ್ಕೆ? ರಶ್ಮಿಕಾ ಬಗ್ಗೆ ಪ್ರಮೋದ್​ ಶೆಟ್ಟಿ ಪ್ರಶ್ನೆ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts