ಹೈದರಾಬಾದ್: ರಾಮ್ಚರಣ್ ತೇಜ ಪ್ಯಾನ್ ಇಂಡಿಯಾ ನಟರಾಗಿಬಿಟ್ಟಿದ್ದಾರೆ. ಈಗಾಗಲೇ ಅವರ ‘ಆರ್ಆರ್ಆರ್’ ಚಿತ್ರವು ದೊಡ್ಡ ಸಕ್ಸಸ್ ಕಂಡಿದೆ. ಅದರ ನಂತರ ಶಂಕರ್ ಅಭಿನಯದ ಹೊಸ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವನ್ನು ರಾಮ್ಚರಣ್ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ‘ಕಾಳಿ’ಗೆ ಬಂದರು ಸಪ್ತಮಿ ಗೌಡು; ಜನವರಿಯಿಂದ ಚಿತ್ರೀಕರಣ ಪ್ರಾರಂಭ
ಇಂದು ರಾಮ್ಚರಣ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್ ಇಂಡಿಯಾ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ. ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಆದ ‘ಉಪ್ಪೆನಾ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ, ಈಗ ರಾಮ್ ಚರಣ್ ಅವರನ್ನು ಈ ಹೊಸ ಚಿತ್ರದಲ್ಲಿ ನಿರ್ದೇಶಿಸಲಿದ್ದಾರೆ. ಪ್ಯಾನ್ ಇಂಡಿಯಾಗೆ ಆಗುವ ಚಿತ್ರಕಥೆಯೊಂದನ್ನು ಬುಚ್ಚಿ ಬಾಬು ಸಿದ್ಧಪಡಿಸಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕೆ ರಾಮ್ ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಮೈತ್ರಿ ಮೂವಿ ಮೇಕರ್ಸ್ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್ಗಳ ಅಡಿಯಲ್ಲಿ ಅದ್ದೂರಿ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ.
ಇದನ್ನೂ ಓದಿ: ರಾಣ ಅಬ್ಬರಿಸಲಿಲ್ಲ; ದಿಲ್ ಪಸಂದ್ ರುಚಿಸಲಿಲ್ಲ … ನವೆಂಬರ್ ಚಿತ್ರಗಳ ಹಣೆಬರಹ ಇದು
ಸದ್ಯ ಶಂಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್ಚರಣ್ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ.
ನಾವು ಯಾರು ಅವರ ಬಗ್ಗೆ ಕಾಮೆಂಟ್ ಮಾಡುವುದಕ್ಕೆ? ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಪ್ರಶ್ನೆ …