More

    ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ದಿನಗಣನೆ; ಸಲ್ಮಾನ್​-ಶಾರುಖ್​-ಆಮೀರ್​ ಖಾನ್​ಗಿಲ್ಲ ಆಹ್ವಾನ

    ಮುಂಬೈ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಧಾರ್ಮಿಕ ವಿಧಿವಿಧಾನಗಳು ಅರಂಭಗೊಂಡಿವೆ. ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದು, ಹಲವಾರು ಖ್ಯಾತನಾಮರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ.

    ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಅನೇಕ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸಿನಿಮಾ ನಟ-ನಟಿಯರ ಹೆಸರುಗಳು ಆಹ್ವಾನಿತರ ಪಟ್ಟಿಯಲ್ಲಿ ಇವೆ. ಈಗಾಗಲೇ ಆಹ್ವಾನ ಪತ್ರಿಕೆಯ ಫೋಟೋ ವೈರಲ್​ ಆಗಿದೆ. ಈ ನಡುವೆ ಭಾರತೀಯ ಚಿತ್ರರಂಗದ ಕೆಲವು ಪ್ರಮುಖ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದು ಬಂದಿದೆ.

    ಈ ಬಗ್ಗೆಯೂ ವ್ಯಾಪಕವಾಗಿ ಚರ್ಚೆ ನಡೆಯುತ್ತಿದೆ. ಅದರಲ್ಲಿ ಬಾಲಿವುಡ್​ನ ಖಾನ್​ತ್ರಯರು ಕೂಡ ಒಳಗೊಂಡಿದ್ದಾರೆ. ಶಾರುಖ್​, ಸಲ್ಮಾನ್​ ಹಾಗೂ ಆಮೀರ್​ ಖಾನ್​ರನ್ನು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ತಿಳಿದು ಬಂದಿದೆ. ಆಹ್ವಾನಿತರ ಪಟ್ಟಿಯಲ್ಲಿ ಈ ಸೆಲೆಬ್ರಿಟಿಗಳ ಹೆಸರು ಕಾಣಿಸಿಲ್ಲ ಎಂದು ವರದಿಯಾಗಿದೆ.

    Ayodhya

    ಇದನ್ನೂ ಓದಿ: ಮೃತದೇಹ ಸಾಗಿಸುತ್ತಿದ್ದ ಕಾರು ಪಲ್ಟಿ; ಮೂವರು ಸಾವು

    ತಮ್ಮ ಅಭಿನಯ ಹಾಗೂ ಮ್ಯಾನರಿಸಂ ಮೂಲಕ ಬಾಲಿವುಡ್​ನಲ್ಲಿ ಛಾಪು ಮೂಡಿಸಿರುವ ಖಾನ್​ತ್ರಯರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಿಲ್ಲದಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

    ಅಕ್ಷಯ್​ ಕುಮಾರ್​, ರಜನಿಕಾಂತ್​, ಆಯುಷ್ಮಾನ್​ ಖುರಾನಾ, ಕಂಗನಾ ರಣಾವತ್​, ಆಲಿಯಾ ಭಟ್​, ರಣಬೀರ್​ ಕಪೂರ್​, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ರಜನಿಕಾಂತ್​, ಅನುಪಮ್​ ಖೇರ್​, ಮಾಧುರಿ ದೀಕ್ಷಿತ್​, ರಿಷಬ್​ ಶೆಟ್ಟಿ, ಯಶ್​, ಅಜಯ್​ ದೇವಗನ್​, ಪ್ರಭಾಸ್​, ರಾಮ್​ ಚರಣ್​, ಸನ್ನಿ ಡಿಯೋಲ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಚಿರಂಜೀವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಿರುವ ಬಗ್ಗೆ ವರದಿ ಆಗಿದೆ.

    ಐಶ್ವರ್ಯ ರೈ, ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್​, ಕರೀನಾ ಕಪೂರ್​ ಖಾನ್​, ಸೈಫ್​ ಅಲಿ ಖಾನ್​, ಕರಣ್​ ಜೋಹರ್​, ಶಿಲ್ಪಾ ಶೆಟ್ಟಿ, ಸಂಜಯ್ ದತ್​ ಮುಂತಾದ ಕಲಾವಿದರಿಗೂ ಆಹ್ವಾನ ತಲುಪಿಲ್ಲ. ಎಂದು ತಿಳಿದು ಬಂದಿದೆ. ಅಂತಿಮವಾಗಿ ಯಾವೆಲ್ಲಾ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts