More

    ಅಯೋಧ್ಯೆ ರಾಮಭಕ್ತರಿಗೆ ಸಿಗಲಿದೆ ತಿರುಪತಿ ಲಡ್ಡು- 1 ಲಕ್ಷ ಲಡ್ಡು ಪೂರೈಕೆಗೆ ಟಿಟಿಡಿ ಸಿದ್ಧತೆ!

    ತಿರುಪತಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ಮತ್ತೊಂದೆಡೆ ದೇಶ ವಿದೇಶದಿಂದ ಅಯೋಧ್ಯೆಗೆ ರಾಮಭಕ್ತರು ತಮ್ಮ ಕೈಲಾದಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಿಂದಲೂ ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡಲು ಟಿಟಿಡಿ ಸಿದ್ಧತೆ ಮಾಡಿಕೊಂಡಿದೆ.

    ಇದನ್ನೂ ಓದಿ: ಮಾಲ್​ಗಳಲ್ಲೂ ರಾಮಮಂದಿರ ಲೋಕಾರ್ಪಣೆ ಸಂಭ್ರಮಕ್ಕೆ ಸಿದ್ಧತೆ

    ಈ ಸಬಂಧ ತಿರುಪತಿ ತಿರುಮಲ ದೇವಸ್ಥಾನ ಸಮಿತಿ(ಟಿಟಿಡಿ) ಅಧಿಕೃತವಾಗಿ ತಿಳಿಸಿದೆ. ದೇಗುಲದ ವತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ ಮಾಡಲಾಗುವುದು ಎಂದು ಹೇಳಿದೆ.

    ಉದ್ಘಾಟನೆಯ ದಿನ ರಾಮಭಕ್ತರಿಗೆ ಈ ಲಡ್ಡು ವಿತರಿಸಲಾಗುವುದು. ಪ್ರತಿ ಲಡ್ಡುವಿನ ತೂಕ 25 ಗ್ರಾಂ ಇರುತ್ತದೆ ಎಂದು ಟಿಟಿಡಿಯ ಅಧಿಕಾರಿಗಳು ವಿವರಿಸಿದ್ದಾರೆ.

    ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುವ ಕುರಿತು ಟಿಟಿಡಿ ಒಪ್ಪಿಗೆ ನೀಡಿದೆ. ಹೀಗಾಗಿ ಶ್ರೀರಾಮ ಪ್ರಾಣ ಪತಿಷ್ಠಾಪನೆಯ ದಿನದಂದು ಭಕ್ತರಿಗೆ ವಿತರಣೆ ಮಾಡಲು ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುತ್ತೇವೆ ಎಂದು ಟಿಟಿಡಿ ಆಡಳಿತ ಕಾರ್ಯನಿರ್ವಾಹಕ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.

    ಆಕೆಯನ್ನು ದೂರವಿಟ್ಟು ತಪ್ಪು ಮಾಡಿದೆ ಎಂದಿದ್ದೇಕೆ ಇನ್ಫೋಸಿಸ್​ ನಾರಾಯಣಮೂರ್ತಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts