ನವದೆಹಲಿ: ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಆಗಸ್ಟ್ 5ರಂದು ನಡೆಯಲಿದೆ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಹಾಗೇ, ಈ ಕಾರ್ಯಕ್ರಮದಲ್ಲಿ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಾಧು-ಸಂತರು, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ.
ರಾಮಮಂದಿರ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆ, ಬಾಬ್ರಿ ಮಸೀದಿ ಪರ ಪ್ರಮುಖ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಅವರಿಗೆ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದಶಕಗಳಿಂದಲೂ ಪೊಲೀಸರು ಹುಡುಕುತ್ತಿದ್ದ ನಕ್ಸಲನನ್ನು ರಕ್ಷಾ ಬಂಧನದಂದೇ ಶರಣಾಗುವಂತೆ ಮಾಡಿದ್ದು ಆತನ ಸೋದರಿ…!
ಹಾಗೇ, ಈ ಆಮಂತ್ರಣ ಪತ್ರಿಕೆ ಹಳದಿ ಬಣ್ಣದಲ್ಲಿದೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನೂ ಹಾಕಲಾಗಿದೆ. ಒಟ್ಟು 200 ಜನರಿಗೆ ಆಮಂತ್ರಣ ಪತ್ರಿಕೆ ಕಳಿಸಲಾಗುತ್ತದೆ ಎಂದು ರಾಮಜನ್ಮಭೂಮಿ ಟ್ರಸ್ಟ್ನ ಮೂಲಗಳು ತಿಳಿಸಿವೆ.
ರಾಮಮಂದಿರ ಒಟ್ಟು 161 ಅಡಿ ಎತ್ತರ ಇರಲಿದ್ದು, ಮೂರರಿಂದ ಮೂರುವರೆ ವರ್ಷಗಳ ಅವಧಿಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.
ಸದ್ಯ ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಸ್ಥಳದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿಯವರ ಪೋಸ್ಟರ್ ಹಾಗೂ ಕೇಸರಿ ಧ್ವಜಗಳನ್ನು ಅಳವಡಿಸಲಾಗುತ್ತಿದೆ. (ಏಜೆನ್ಸೀಸ್)
ಮೂರು ಭಾಷೆಗಳಲ್ಲಿ ತ್ರಿಕೋನ ಬಿಡುಗಡೆ; ವರಮಹಾಲಕ್ಷ್ಮೀ ಹಬ್ಬಕ್ಕೆ ಬಂತು ಮೋಷನ್ ಪೋಸ್ಟರ್