More

    ರಾಮಕೃಷ್ಣ ಮಿಷನ್‌ನ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ; ಪ್ರಧಾನಿ ಸೇರಿ ಕಂಬನಿ ಮಿಡಿದ ಗಣ್ಯರು

    ಕಲ್ಕತ್ತಾ: ರಾಮಕೃಷ್ಣ ಮಿಷನ್​ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ್​ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ರಾಮಕೃಷ್ಣ ಮಿಷನ್, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್‌ ಪೂಜ್ಯನೀಯ ಅಧ್ಯಕ್ಷರಾದ ಶ್ರೀ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ರಾತ್ರಿ 8.14ಕ್ಕೆ ನಿಧನರಾಗಿದ್ದಾರೆ. ಸ್ಮರಣಾನಂದರು 2017ರಲ್ಲಿ ರಾಮಕೃಷ್ಣ ಮಿಷನ್‌ನ 16ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದರು ಎಂದು ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಸ್ಮರಣಾನಂದರನ್ನು ಮೂತ್ರನಾಳದ ಸೋಂಕಿನಿಂದಾಗಿ ಜನವರಿ 29 ರಂದು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನಕ್ಕೆ ದಾಖಲಿಸಲಾಗಿತ್ತು. ನಂತರ ಅವರು ಉಸಿರಾಟದ ವೈಫಲ್ಯ ಅನುಭವಿಸಿದ್ದರು, ಇದಕ್ಕಾಗಿ ಅವರನ್ನು ಮಾರ್ಚ್ 03ರಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ರಾಮಕೃಷ್ಣ ಮಿಷನ್​ನ ಅಧ್ಯಕ್ಷರಾದ ಶ್ರೀ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಇದನ್ನೂ ಓದಿ: ಬೆಂಗಳೂರು ಜಲಕ್ಷಾಮ; ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾಸ್ಟಾರ್​

    ತಮ್ಮ ಜೀವನವನ್ನೇ ಆಧ್ಯಾತ್ಮಿಕತೆ ಮತ್ತು ಸೇವೆಗೆ ಮುಡಿಪಾಗಿಟ್ಟಿದ್ದ ಸ್ಮರಣಾನಂದರು ಅಸಂಖ್ಯಾತ ಹೃದಯಗಳಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ. ಅವರ ಬದುಕು ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಲಿದೆ. ಹಲವು ವರ್ಷಗಳಿಂದ ನಾನು ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದೆ. 2020ರಲ್ಲಿ ಬೇಲೂರು ಮಠಕ್ಕೆ ಭೇಟಿ ನೀಡಿದ್ದಾಗ, ಅವರೊಂದಿಗೆ ಸಂವಾದ ನಡೆಸಿದ್ದೆ. ಕೆಲವು ವಾರಗಳ ಹಿಂದಷ್ಟೇ ಕೋಲ್ಕತ್ತದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದಾರೆ.

    ಸ್ಮರಣಾನಂದರು ಭಾರತೀಯ ಆಧ್ಯಾತ್ಮಿಕತೆಯೆ ದಾರಿದೀಪವಾಗಿದ್ದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಂಬನಿ ಮಿಡಿದಿದ್ದಾರೆ. ಈ ಮಹಾನ್ ಸನ್ಯಾಸಿ ತನ್ನ ಜೀವಿತಾವಧಿಯಲ್ಲಿ ಜಗತ್ತಿಗೆ ಆಧ್ಯಾತ್ಮಿಕ ನಾಯಕತ್ವ ನೀಡಿದ್ದಾರೆ. ಸ್ಮರಣಾನಂದರ ನಿಧನದಿಂದ ತುಂಬಾ ದುಃಖವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts