ರಾಮನಗರ: ಅತ್ಯಾಚಾರ ಪ್ರಕರಣದ ಆರೋಪ ಹೊತ್ತಿರುವ ಬಿಡದಿಯ ನಿತ್ಯಾನಂದ ಸ್ವಾಮಿ ವಿರುದ್ಧ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಸರ್ಚ್ ವಾರೆಂಟ್ ಜಾರಿ ಮಾಡಿದೆ.
ಫೆ.19ರಂದು ಸ್ವಾಮಿ ನಿತ್ಯಾನಂದನ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ಆದರೆ ನಿತ್ಯಾನಂದ ಎಲ್ಲಿದ್ದಾನೆ ಎಂಬ ಮಾಹಿತಿಯೇ ಇಲ್ಲದೆ ಕಾರಣ ಮೂವರು ಸಿಒಡಿ ಅಧಿಕಾರಿಗಳನ್ನೊಳಗೊಂಡ ತಂಡ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಅಧಿಕಾರಿಗಳ ಮನವಿಗೆ ಸ್ಪಂದಿಸಿದ ರಾಮನಗರ 3ನೇ ಜಿಲ್ಲಾ ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು, ಸರ್ಚ್ ವಾರೆಂಟ್ ಜಾರಿ ಮಾಡಿದ್ದಾರೆ. ಈ ವಾರೆಂಟ್ಗೆ ಯಾವುದೇ ಕಾಲಮಿತಿ ಇಲ್ಲ. ಅಷ್ಟೇ ಅಲ್ಲದೆ, ನಿತ್ಯಾನಂದನಿಗೆ ಜಾಮೀನು ನೀಡಿದ್ದ ವ್ಯಕ್ತಿಯನ್ನು ಬಂಧಿಸುವಂತೆ ಕೋರ್ಟ್ ಆದೇಶ ನೀಡಿದೆ.