More

    ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದ ಚಿರತೆ

    ರಾಮನಗರ: ಮನೆಯಲ್ಲಿ ಮಲಗಿದ್ದ 3 ವರ್ಷದ ಗಂಡು ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದು ಹಾಕಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

    ಚಿರತೆ ದಾಳಿಗೆ ತುತ್ತಾದ ಮಗುವಿನ ಹೆಸರು ಹೇಮಂತ್. ತಂದೆ ಚಂದ್ರಪ್ಪ ಹಾಗೂ ತಾಯಿ ಮಂಗಳಗೌರಮ್ಮ ಅವರ ಪ್ರೀತಿಯ ಪುತ್ರನಾಗಿದ್ದ. ಮಂಗಳಗೌರಮ್ಮ ತಾಯಿ ಮನೆ ಕದರಯ್ಯನಪಾಳ್ಯವಾಗಿದ್ದು, ವಾರದ ಹಿಂದಷ್ಟೇ ಊರಿಗೆ ಆಗಮಿಸಿದ್ದರು.

    ಇದನ್ನೂ ಓದಿ: ವಿಚಿತ್ರ ಕಾಯಿಲೆಯಿಂದ ಪ್ರತಿನಿತ್ಯ ನೋವುಂಡು ಬದುಕುತ್ತಿರೋ ವ್ಯಕ್ತಿಯ ಕಣ್ಣೀರ ಕತೆಯಿದು!

    ಸೆಕೆಯು ಹೆಚ್ಚಾಗಿದ್ದರಿಂದ ಬಾಗಿಲನ್ನು ತೆರೆದು ಮಲಗಿದ್ದರು. ಈ ವೇಳೆ ಬಂದ ಚಿರತೆ ಮಗುವನ್ನು ಹೊತ್ತೊಯ್ದಿದೆ. ಕತ್ತಲೆಯಲ್ಲಿ ಹುಡುಕಾಡಿದಾಗ ಮನೆಯಿಂದ ಸುಮಾರು ಅರವತ್ತು ಮೀಟರ್ ದೂರದ ಪೊದೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ .

    ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: VIDEO| ಭಾರತದಲ್ಲಿ ಎರಡು ತಲೆ ಹಾವು ಪತ್ತೆ: ಇದರ ವಿಶೇಷತೆ ಕೇಳಿದ್ರೆ ಶಾಕ್ ಆಗ್ತೀರಾ!

    ಒಂದು ಹಾವು ಕಚ್ಚಿದ್ರೂ ಬಚಾವ್​, ಆದ್ರೆ ಮತ್ತೊಂದು ಬೆಡ್​ರೂಮ್​ಗೇ ನುಗ್ಗಿತ್ತು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts