ರಾಮನಗರ: ಮಾಗಡಿ ಪಿಎಸ್ಐ ಹಾಗೂ ಸಾರ್ವಜನಿಕರ ನಡುವೆ ನಡೆದ ಗಲಾಟೆಯಲ್ಲಿ ಪಿಎಸ್ಐ ಶ್ರೀಕಾಂತ್ ತಲೆಗೆ ಗಾಯವಾಗಿದ್ದು, ಅವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಕ್ರಸರ್ಗೆ ಗ್ರಾಮಸ್ಥರು ತಡೆವೊಡ್ಡಿದ್ದು, ಕ್ರಸರ್ ಮಾಲಿಕ ದೂರು ನೀಡಿದ ಹಿನ್ನೆಲೆಯಲ್ಲಿ ಪಿಎಸ್ಐ ಶ್ರೀಕಾಂತ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದ ಗಿರಿಯಪ್ಪ ಎಂಬ ವ್ಯಕ್ತಿಯನ್ನು ಕರೆತರುವಾಗ ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದೆ.
ಇದಾದ ಬಳಿಕ ಗ್ರಾಮಸ್ಥರು ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪಿಎಸ್ಐ ಶ್ರೀಕಾಂತ್ ಹಾಗೂ ಮೂವರು ಗ್ರಾಮಸ್ಥರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರು ನಿಮಾನ್ಸ್ಗೆ ರವಾನಿಸಲಾಗಿದೆ. (ದಿಗ್ವಿಜಯ ನ್ಯೂಸ್)
ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ
ವಿಶೇಷ ವರದಿ: ಕರಗುತ್ತಿದೆ ಕೃಷಿ ಭೂಮಿ, ಬರಡಾಗಿದೆ ಶೇ 36.24 ಪ್ರದೇಶ -ಆಹಾರ ಕೊರತೆ ಭೀತಿ