ಮುಂಬೈ: ‘ದಂಗಲ್’ ಚಿತ್ರದ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಬಿಗ್ ಬಜೆಟ್ ‘ರಾಮಾಯಣ’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಭಾರತೀಯ ಚಿತ್ರೋದ್ಯಮದ ಸ್ಟಾರ್ ನಟರು ಈ ಪ್ರಾಜೆಕ್ಟ್ನ ಭಾಗವಾಗಿರುವುದು ಸಿನಿಪ್ರೇಕ್ಷಕರ ಹುಬ್ಬೇರುವಂತೆ ಮಾಡಿದೆ. ಸಿನಿಮಾ ಕುರಿತಂತೆ ಹೊಸ ಅಪ್ಡೇಟ್ಗಳಿಗಾಗಿ ಕಾತರ ವ್ಯಕ್ತಪಡಿಸಿದ್ದ ಪ್ರೇಕ್ಷಕರಿಗೆ ಇದೀಗ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಜೋಡಿಯ ಫಸ್ಟ್ಲುಕ್ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿರುವ ಸುದ್ದಿ ಭಾರೀ ಬೇಸರ ತಂದಿದೆ.
ಇದನ್ನೂ ಓದಿ: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಇಡೀ ದೇಶವನ್ನು ಮಾರುವುದು ಖಚಿತ; ಅಂಜಲಿ ನಿಂಬಾಳ್ಕರ್!
ಬಾಲಿವುಡ್ ನಟ ರಣಬೀರ್ ಕಪೂರ್, ಟಾಲಿವುಡ್ನ ಸಾಯಿ ಪಲ್ಲವಿ, ರಾಮ ಮತ್ತು ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಕನ್ನಡ ಚಿತ್ರರಂಗದ ‘ಕೆಜಿಎಫ್’ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಮಿಂಚಲು ಸಕಲ ತಯಾರಿಗಳನ್ನು ನಡೆಸುತ್ತಿದ್ದಾರೆ. ಆದರೆ, ಚಿತ್ರತಂಡಕ್ಕೆ ಇದೀಗ ದೊಡ್ಡ ಸಂಕಷ್ಟ ಎದುರಾಗಿದ್ದು, ಸೆಟ್ನಲ್ಲಿ ರಣಬೀರ್ ಮತ್ತು ಸಾಯಿ ಪಲ್ಲವಿ ಅವರ ಫಸ್ಟ್ ಲುಕ್ ಫೋಟೋಗಳು ಆನ್ಲೈನ್ನಲ್ಲಿ ಸೋರಿಕೆಯಾಗಿದೆ.
ಈ ರೀತಿಯ ಸೋರಿಕೆ ಸಮಸ್ಯೆ ಇದೇ ಮೊದಲಲ್ಲ. ಈ ಹಿಂದೆಯೂ ಹಲವಾರು ಸಿನಿಮಾಗಳಿಗೆ ಇಂತಹ ತೊಂದರೆಯಾಗಿದೆ. ಆದರೆ, ತಮ್ಮ ನೆಚ್ಚಿನ ಸ್ಟಾರ್ಗಳ ಬಹುನಿರೀಕ್ಷಿತ ಚಿತ್ರಕ್ಕೆ ಇಂತಹ ಎಡವಟ್ಟು ಮಾಡಿದರಲ್ಲ ಎಂದು ಅಭಿಮಾನಿಗಳು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಮುಂದೆ ಸೋರಿಕೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಫ್ಯಾನ್ಸ್ ಚಿತ್ರತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ,(ಏಜೆನ್ಸೀಸ್).
ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು
ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್ ಜ್ಯಾಕ್ಸ್ ಬಿಚ್ಚಿಟ್ರು ಶಾಕಿಂಗ್ ಸಂಗತಿ