ಬೆಂಗಳೂರು: ಅಶ್ಲೀಲ ಸಿಡಿ ಕೇಸ್ ಪ್ರಕರಣದಲ್ಲಿ ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಿಚಾರಣೆ ನಡೆಸಲು ಎಸ್ಐಟಿ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ. ಬಂಧನ ಭೀತಿ ಹಿನ್ನೆಲೆಯಲ್ಲಿ ಮಾಜಿ ಸಚಿವರ ವಿಚಾರಣೆಗೆ ಹಾಜರಾಗುತ್ತಾರಾ ಎಂಬುದು ಕಾದು ನೋಡಬೇಕಿದೆ.
ಗುರುವಾರ ಎಸ್ಐಟಿ ಅಧಿಕಾರಿಗಳು, ಸಂತ್ರಸ್ತ ಯುವತಿ ಸಮ್ಮುಖದಲ್ಲಿ 8 ಗಂಟೆಗಳ ಕಾಲ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದರು. ಶುಕ್ರವಾರ ಮತ್ತೆ ಯುವತಿ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಯುವತಿ ಮತ್ತೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ. ಮೊದಲು ಯುವತಿ ವಿಚಾರಣೆ ನಡೆಸಿದ ಬಳಿಕ ಮಾಜಿ ಸಚಿವರ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿರಿ: ಇಂಥವರೂ ಇರ್ತಾರಾ? ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರಿಂದ ತಲೆತಗ್ಗಿಸೋ ಕೃತ್ಯ!
ರಮೇಶ್ ಜಾರಕಿಹೊಳಿಗೆ ಏ.2ರಂದು ವಿಚಾರಣೆಗೆ ಬರುವಂತೆ ಎಸ್ಐಟಿ ನೋಟೀಸ್ ನೀಡಿದೆ. ಆದರೆ ಸದ್ಯ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ರಮೇಶ್ ಜಾರಕಿಹೊಳಿ ವಿಚಾರಣೆಗೆ ಬರುವುದೇ ಡೌಟ್ ಎಂಬ ಮಾತು ಕೇಳಿ ಬಂದಿದೆ.
ಬಿಜೆಪಿ ಶಾಸಕನ ಜೀಪಿನಲ್ಲಿ ಇವಿಎಂ ಪತ್ತೆ: ಚುನಾವಣೆಯನ್ನೇ ಕದಿಯುವ ಯತ್ನ ಎಂದು ಕಾಂಗ್ರೆಸ್ ವ್ಯಂಗ್ಯ!
ಸುಷ್ಮಾ, ಜೇಟ್ಲಿ ಸಾವಿಗೆ ಪ್ರಧಾನಿಯತ್ತ ಬೊಟ್ಟು ಮಾಡಿದ ಡಿಎಂಕೆ- ಬೆಳ್ಳಂಬೆಳಗ್ಗೆ ಐಟಿ ಇಲಾಖೆ ನೀಡಿತು ಬಿಗ್ ಶಾಕ್!
ನಯನತಾರಾ-ಉದಯನಿಧಿ ಸ್ಟಾಲಿನ್ ನಡುವೆ ರಹಸ್ಯ ಸಂಬಂಧ? ಹಿರಿಯ ನಟನ ಸ್ಫೋಟಕ ಹೇಳಿಕೆ!