ರಾಮನಗರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ನಿನ್ನೆ ಐವರು ಶಂಕಿತ ಆರೋಪಿಗಳನ್ನು ಎಸ್ಐಟಿ(ಸ್ಪೆಷಲ್ ಇನ್ವೆಷ್ಟಿಗೇಶನ್ ಟೀಂ) ವಶಕ್ಕೆ ಪಡೆದಿತ್ತು. ಈ ಐವರ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ?
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನವೇ ಎಸ್ಐಟಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಐವರು ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಳಿಕ ಆ ದಿನವೇ ಬಿಟ್ಟು ಕಳುಹಿಸಿದ್ದಾರೆ. ಎಸ್ಐಟಿ ವಿಚಾರಣೆ ನಡೆಸಿದ ಆ ಐವರ ಪರಿಚಯ ತನಗಿಲ್ಲ ಎಂದು ದಿನೇಶ್ ಕಲ್ಲಹಳ್ಳಿ ಹೇಳುತ್ತಿದ್ದಾರೆ.
ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಯುವತಿಗೆ ಪ್ರಾಣ ಬೆದರಿಕೆ ಇದೆ ಎಂದು ಆಕೆಯ ಕುಟುಂಬ ಹೇಳಿದೆ ಎಂದು ಮಾ.2ರಂದು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿದ್ದ ಜೋಶ್ ದೂರುದಾರ ದಿನೇಶ್ಗೀಗ ಇಲ್ಲವಾಗಿದೆ. ಎಸ್ಐಟಿ ತನಿಖೆ ಬೆನ್ನಲ್ಲೇ ಮನೆಯ ರೂಂನಿಂದ ಹೊರಬರುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ.
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು
ಜಾರಕಿಹೊಳಿ ಸಿಡಿ ಕೇಸ್: ಸಿಕ್ಕಿಬಿದ್ದದ್ದು ಇಬ್ಬರಲ್ಲ, ಐವರು! ಯುವತಿಯೂ ಇದ್ದಾಳೆ
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು