ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಗೋಕಾಕ್​ ಬಂದ್​! ಸೀಮೆಎಣ್ಣೆ ಸುರಿದುಕೊಂಡು ಆಕ್ರೋಶ

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಹುಕರ್​ನ ಸ್ವಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಯ್ಯೋಯ್ಯೋ ಅನ್ಯಾಯ… ಎಂದು ಕೂಗಾಡುತ್ತ ಬಸವೇಶ್ವರ ವೃತ್ತದಲ್ಲಿ ಹೈಡ್ರಾಮ ಮಾಡಿದ ರಮೇಶ್​ ಜಾರಕಿಹೊಳಿ ಬೆಂಬಲಿಗರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿತ್ತು. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಹಲವೆಡೆ ಕಾಂಗ್ರೆಸ್​-ಜೆಡಿಎಸ್​ ಕಾರ್ಯಕರ್ತರು ಪ್ರತ್ಯೇಕವಾಗಿ … Continue reading ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಗೋಕಾಕ್​ ಬಂದ್​! ಸೀಮೆಎಣ್ಣೆ ಸುರಿದುಕೊಂಡು ಆಕ್ರೋಶ