More

    ನನ್ಗೆ ಸುಳ್ಳು ಹೇಳುವ ಚಟವಿಲ್ಲ, ನನ್ನ ಜತೆ ಎಚ್​ಡಿಕೆ ಫೋನ್​ ಸಂಪರ್ಕದಲ್ಲಿದ್ದಾರೆ… ಎನ್ನುತ್ತಲೇ ಅಂತೆ-ಕಂತೆಗೆ ತೆರೆ ಎಳೆದ ರಮೇಶ್ ಜಾರಕಿಹೊಳಿ​

    ಬೆಳಗಾವಿ: ಸಿಡಿ ಕೇಸ್​ನಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿಗೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಇನ್ನೂ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ರಮೇಶ್​ ಜಾರಕಿಹೊಳಿ ಅವರ ಮುಂದಿನ ನಡೆ ಕುರಿತು ಅಂತೆ-ಕಂತೆ ಹರಿದಾಡುತ್ತಿದೆ. ಆದರೆ ಈ ಕುರಿತು ಸ್ವತಃ ಜಾರಕಿಹೊಳಿ ಅವರೇ ಪ್ರತಿಕ್ರಿಯಿಸಿದ್ದು, ನನಗೆ ಸುಳ್ಳು ಹೇಳುವ ಚಟವಿಲ್ಲ ಎಂದಿದ್ದಾರೆ.

    ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಶನಿವಾರ ಮಾತನಾಡಿದ ರಮೇಶ್​ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಸರವಾಗಿರುವುದರಿಂದ ಕಳೆದೊಂದು ವರ್ಷದಿಂದ ಮಾಧ್ಯಮದವರಿಂದ ದೂರ ಇದ್ದೆ. ಆದರೆ, ಅನಿವಾರ್ಯವಾಗಿ ಈಗ ವಿಷಯ ಸ್ಪಷ್ಟಪಡಿಸುತ್ತಿದ್ದೇನೆ. ನನಗೆ ಸುಳ್ಳು ಹೇಳುವ ಚಟವಿಲ್ಲ. ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನನ್ನ ಜತೆ ಫೋನ್​ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

    2023ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಆ ಸಂದರ್ಭದಲ್ಲಿ ಪಕ್ಷದ ಹತ್ತು ಪ್ರಮುಖರಲ್ಲಿ ನಾನು ಒಬ್ಬ ಆಗುತ್ತೇನೆ. ಉನ್ನತ ಹುದ್ದೆಗೆ ಹೋಗಿ ಸೇವೆ ಮಾಡುತ್ತೇನೆ. 2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಪ್ರಮುಖ ಮುಖಂಡನಾಗಿ ಕೆಲಸ ಮಾಡುತ್ತೇನೆ ಎಂದರು.

    ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್​ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್​ ಶಕ್ತಿ ಪ್ರದರ್ಶನ

    ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts