ಬೆಳಗಾವಿ: ಸಿಡಿ ಕೇಸ್ನಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿಗೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಇನ್ನೂ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ರಮೇಶ್ ಜಾರಕಿಹೊಳಿ ಅವರ ಮುಂದಿನ ನಡೆ ಕುರಿತು ಅಂತೆ-ಕಂತೆ ಹರಿದಾಡುತ್ತಿದೆ. ಆದರೆ ಈ ಕುರಿತು ಸ್ವತಃ ಜಾರಕಿಹೊಳಿ ಅವರೇ ಪ್ರತಿಕ್ರಿಯಿಸಿದ್ದು, ನನಗೆ ಸುಳ್ಳು ಹೇಳುವ ಚಟವಿಲ್ಲ ಎಂದಿದ್ದಾರೆ.
ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಶನಿವಾರ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಸರವಾಗಿರುವುದರಿಂದ ಕಳೆದೊಂದು ವರ್ಷದಿಂದ ಮಾಧ್ಯಮದವರಿಂದ ದೂರ ಇದ್ದೆ. ಆದರೆ, ಅನಿವಾರ್ಯವಾಗಿ ಈಗ ವಿಷಯ ಸ್ಪಷ್ಟಪಡಿಸುತ್ತಿದ್ದೇನೆ. ನನಗೆ ಸುಳ್ಳು ಹೇಳುವ ಚಟವಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನನ್ನ ಜತೆ ಫೋನ್ ಸಂಪರ್ಕದಲ್ಲಿದ್ದಾರೆ. ಆದರೆ, ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
2023ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಆ ಸಂದರ್ಭದಲ್ಲಿ ಪಕ್ಷದ ಹತ್ತು ಪ್ರಮುಖರಲ್ಲಿ ನಾನು ಒಬ್ಬ ಆಗುತ್ತೇನೆ. ಉನ್ನತ ಹುದ್ದೆಗೆ ಹೋಗಿ ಸೇವೆ ಮಾಡುತ್ತೇನೆ. 2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಪ್ರಮುಖ ಮುಖಂಡನಾಗಿ ಕೆಲಸ ಮಾಡುತ್ತೇನೆ ಎಂದರು.
ಮಾಲೂರಿಗೆ ಬಂದ ಪಂಚರತ್ನ ರಥಯಾತ್ರೆ: ದಾರಿಯುದ್ದಕ್ಕೂ ಎಚ್ಡಿಕೆ ಅದ್ದೂರಿ ಸ್ವಾಗತ, ಜೆಡಿಎಸ್ ಶಕ್ತಿ ಪ್ರದರ್ಶನ
ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್ವೆಲ್ಗೆ ಪ್ರಯಾಣ