ಗಂಗೊಳ್ಳಿ: ಪೇಜಾವರ ಅಧೋಕ್ಷಜ ಮಠ ಉಡುಪಿ, ಅಖಿಲ ಭಾರತ ಮಾದ್ವ ಮಹಾಮಂಡಲ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಹಾಗೂ ಅನೇಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ರಾಮೋತ್ಸವ ಪ್ರಯುಕ್ತ ದಶಕೋಟಿ ರಾಮತಾರಕ ಮಂತ್ರ ಜಪಯಜ್ಞ, ಶ್ರೀ ರಾಮತಾರಕ ಮಂತ್ರ ಜಪಾನುಷ್ಠಾನ ಪರ್ವ ಕಾರ್ಯಕ್ರಮ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಶನಿವಾರ ನಡೆಯಿತು.
ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಎನ್.ಪ್ರಕಾಶ್ ನಾಯಕ್, ಕೃಷ್ಣಮೂರ್ತಿ ಕಿಣಿ, ಶಿಶು ಮಂದಿರ ಅಧ್ಯಕ್ಷ ಬಿ.ರಾಘವೇಂದ್ರ ಪೈ, ಸಂಚಾಲಕ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಅಶ್ವಿತಾ ಜಿ.ಪೈ, ಮಾಜಿ ಅಧ್ಯಕ್ಷರಾದ ಸವಿತಾ ಎನ್.ದೇವಾಡಿಗ, ಬಿ.ಲಕ್ಷ್ಮೀಕಾಂತ ಮಡಿವಾಳ, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ರತ್ನಾ, ಪಾಲಕರು, ಮಾತೆಯರು ಉಪಸ್ಥಿತರಿದ್ದರು.