More

    ಅರುಣಕುಮಾರ ಪೂಜಾರಗೆ ಟಿಕೆಟ್ ನೀಡುವಂತೆ ಬೆಂಬಲಿಗರಿಂದ ಸಿಎಂಗೆ ಮನವಿ

    ರಾಣೆಬೆನ್ನೂರ: ರಾಣೆಬೆನ್ನೂರ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್‌ಅನ್ನು ಶಾಸಕ ಅರುಣಕುಮಾರ ಪೂಜಾರ ಅವರಿಗೆ ನೀಡಬೇಕು ಎಂದು ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಸೋಮವಾರ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
    ಬೆಂಗಳೂರಿನ ಬಿಜೆಪಿ ಕಚೇರಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ತೆರಳಿದ ಕಾರ್ಯಕರ್ತರು, 2019ರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದ ಅರುಣಕುಮಾರ ಪೂಜಾರಗೆ ಈ ಬಾರಿ ಟಿಕೆಟ್ ನೀಡಬೇಕು.
    ಅರುಣಕುಮಾರ ಪೂಜಾರಗೆ ಟಿಕೆಟ್ ಕೈ ತಪ್ಪುವ ಸಂಭವವಿದೆ ಎಂದು ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದು ಕಾರ್ಯಕರ್ತರಲ್ಲಿ ಆತಂಕ ಉಂಟು ಮಾಡಿದೆ. ಆದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಹಾಗೂ ಪಕ್ಷದ ಹಿರಿಯ ನಾಯಕರು ರಾಣೆಬೆನ್ನೂರಿನಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಿಸಲು ಅರುಣಕುಮಾರ ಪೂಜಾರಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಿವಕುಮಾರ ನರಸಗೊಂಡರ, ನಗರಸಭೆ ಸದಸ್ಯ ಪ್ರಕಾಶ ಪೂಜಾರ, ಮಂಜುನಾಥ ಓಲೇಕಾರ, ಬಸವರಾಜ ಚಳಗೇರಿ, ಆನಂದ ಇಟಗಿ, ಕೆಎಂಪಿ ಮಣಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts