More

    ಸಾರಿಗೆ ಸಂಸ್ಥೆ ಬಸ್ ಡಿಕ್ಕಿ: ಬೈಕ್ ಮೇಲೆ ಬಂದಿಳಿದವ ಸಾವು

    ರಾಣೆಬೆನ್ನೂರ: ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಇಲ್ಲಿಯ ಶಂಕರ ಚಿತ್ರಮಂದಿರದ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
    ಹೂವಿನಹಡಗಲಿ ಪಟ್ಟಣದ ಪುರುಷೋತ್ತಮ ವಸಂತಪ್ಪ ಈಟಿ ಮೃತ ವ್ಯಕ್ತಿ.
    ಈತ ತನ್ನ ಸ್ನೇಹಿತನ ಬೈಕ್ ಇಳಿದು ರಸ್ತೆ ಬದಿ ನಿಂತಿದ್ದ ಸಮಯದಲ್ಲಿ ಯಾವುದೋ ಸಾರಿಗೆ ಸಂಸ್ಥೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ನೆಲಕ್ಕೆ ಬಿದ್ದ ಪುರುಷೋತ್ತಮನ ತಲೆಗೆ ಬಲವಾದ ಪೆಟ್ಟು ಬಿದ್ದು, ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts