More

    ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ವಶ

    ರಾಣೆಬೆನ್ನೂರ: ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 85 ಸಾವಿರ ರೂ. ಮೌಲ್ಯದ 120 ಟನ್ ಮರಳನ್ನು ಕಂದಾಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
    ಕೆಲವರು ತುಂಗಭದ್ರಾ ನದಿಪಾತ್ರದಿಂದ ಅಕ್ರಮವಾಗಿ ಮರಳು ಸಂಗ್ರಹ ಮಾಡಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮರಳನ್ನು ವಶಪಡಿಸಿಕೊಂಡಿದ್ದಾರೆ.
    ಕಂದಾಯ ನಿರೀಕ್ಷಕ ವಾಗೀಶ ಮಳೆಮಠ, ಅಮೃತ ಗ್ರಾಮ ಆಡಳಿತ ಅಧಿಕಾರಿ ಮಂಜಪ್ಪ ಪಿ., ಅನಿಲ ನಾಯಕ, ಎಎಸ್‌ಐ ಗಣೇಶ ಅಬ್ಬಿಗೇರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts