ರಾಣೆಬೆನ್ನೂರ: ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 85 ಸಾವಿರ ರೂ. ಮೌಲ್ಯದ 120 ಟನ್ ಮರಳನ್ನು ಕಂದಾಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.
ಕೆಲವರು ತುಂಗಭದ್ರಾ ನದಿಪಾತ್ರದಿಂದ ಅಕ್ರಮವಾಗಿ ಮರಳು ಸಂಗ್ರಹ ಮಾಡಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಕಂದಾಯ ನಿರೀಕ್ಷಕ ವಾಗೀಶ ಮಳೆಮಠ, ಅಮೃತ ಗ್ರಾಮ ಆಡಳಿತ ಅಧಿಕಾರಿ ಮಂಜಪ್ಪ ಪಿ., ಅನಿಲ ನಾಯಕ, ಎಎಸ್ಐ ಗಣೇಶ ಅಬ್ಬಿಗೇರಿ ಮತ್ತಿತರರು ಇದ್ದರು.