More

    ಮಾದರಿಯಾಗಲಿದೆ ರಾಣೆಬೆನ್ನೂರ ಮತಕ್ಷೇತ್ರ

    ರಾಣೆಬೆನ್ನೂರ: ತಾಲೂಕಿನ ಜನತೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ರಸ್ತೆ ನಿರ್ಮಾಣ ಸೇರಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನದಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನೂ ಹೆಚ್ಚಾಗಲಿವೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

    ತಾಲೂಕಿನ ಕವಲೆತ್ತು, ಮೇಡ್ಲೇರಿ, ದೇವಗೊಂಡನಕಟ್ಟಿ, ನಂದಿಹಳ್ಳಿ, ಆಲದಕಟ್ಟಿ ಸೇರಿ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ರಸ್ತೆ, ಗಟಾರು ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

    ಉಪಚುನಾವಣೆಗೂ ಮುನ್ನ ಜನತೆಗೆ ನಾವು ನೀಡಿದ ಭರವಸೆಯಂತೆ ಈಗಾಗಲೇ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಿದ್ದೇವೆ. ಆದರೆ, ರಾಣೆಬೆನ್ನೂರ ಕ್ಷೇತ್ರ ರಾಜ್ಯದಲ್ಲಿಯೇ ಮಾದರಿ ಆಗಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು, ರಸ್ತೆ, ಸೂರು ಇಲ್ಲದವರಿಗೆ ನಿವೇಶನ ನೀಡುವುದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡಲಾಗುವುದು ಎಂದರು.

    ಎಪಿಎಂಸಿ ಸದಸ್ಯ ಬಸವರಾಜ ಹುಲ್ಲತ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಮಂಜುನಾಥ ಓಲೇಕಾರ ಹಾಗೂ ಆಯಾ ಗ್ರಾಮಗಳ ಮುಖಂಡರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts