ರಾಣೆಬೆನ್ನೂರ: ನಗರದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಬೆಂಗಳೂರಿನ ಕ್ಯೂ ಸ್ಪೈಡರ್ಸ್ ಟೆಕ್ನಾಲಜಿಸ್ ಕಂಪನಿ ವತಿಯಿಂದ ವಿದ್ಯಾರ್ಥಿಗಳ ಕ್ಯಾಂಪಸ್ ಸಂದರ್ಶನ ನಡೆಯಿತು.
13 ವಿದ್ಯಾರ್ಥಿಗಳು ಸಂದರ್ಶನದಲ್ಲಿ ಆಯ್ಕೆಯಾದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ಶಿವಕುಮಾರ, ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ. ಡಿ.ಎಸ್. ವಿಶ್ವನಾಥ ಹಾಗೂ ಸಿಬ್ಬಂದಿ ಇದ್ದರು.