ಟಿಟಿ-ಕಾರ್​ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Accident

ಚಿಕ್ಕಮಗಳೂರು: ಕಾರು ಹಾಗೂ ಟೆಂಪೋ ಟ್ರಾವೆಲರ್​(TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ ನಡೆದಿದೆ.

ಕಡುರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಮತ್ತಘಟ್ಟ ಬಳಿ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಟಿಟಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಮೃತ ದುರ್ದೈವಿಗಳನ್ನು ಮಯಾಂಕ್​(3) ಹಾಗೂ ಗಿರಿಧರ್(46) ಎಂದು ಗುರುತಿಸಲಾಗಿದೆ.

Accident

ಶುಭಕಾರ್ಯಕ್ಕೆ ತೆರಳುವ ವೇಳೆ ಘಟನೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಗಿರಿಧರ್ ಕುಟುಂಬ ಸಮೇತರಾಗಿ ಸಂಬಂಧಿಕರೊಬ್ಬರ ಮದುವೆಗೆಂದು ತೆರಳುತ್ತಿದ್ದರು.

ಇದನ್ನೂ ಓದಿ: ಅನ್ಯ ಜಾತಿಯ ಯುವಕನ ಜೊತೆ ಮದುವೆ; ನವದಂಪತಿಯನ್ನು ಹತ್ಯೆ ಮಾಡಿದ ಕುಟುಂಬಸ್ಥರು

ಈ ವೇಳೆ ಚಿಕ್ಕಮಗಳೂರಿನಿಂದ ಕೇರಳ ಕಡೆ ಹೊರಟ್ಟಿದ್ದ ಟಿಟಿ ಹಾಗೂ ಕಾರ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಗಿರಿಧರ್​, ಮಯಾಂಕ್​ ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Accident (1)

ಗಂಭೀರ ಗಾಯ

ಕಾರ್​ ಹಾಗೂ ಟಿಟಿ ನಡುವಿನ ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳು ಪಲ್ಟಿ ಹೊಡೆದಿದ್ದು ಕೇರಳ ಪ್ರವಾಸಕ್ಕೆ ಟೆಂಪೋ ಟ್ರಾವೆಲರ್ನಲ್ಲಿ ತೆರಳುತ್ತಿದ್ದ 7 ಮಂದಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

car Accident

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…