More

    ಅಪ್ರಾಪ್ತೆಯ ಅತ್ಯಾಚಾರ ಸಾಬೀತು:25ರಂದುಶಿಕ್ಷೆ ಪ್ರಮಾಣ ಪ್ರಕಟ ಸಾಧ್ಯತೆ

     

    ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ತೀರ್ಪು ನೀಡಿದ್ದಾರೆ.

    ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಸಮುದಾಯದ ಬಾಲಕಿ ಪಿ.ಜೆ.ಜೇಕಬ್ ಆಲಿಯಾಸ್ ಚಾಕೋಚ ಎಂಬಾತನ ಮನೆ ಬಳಿಯ ದಾರಿಯಲ್ಲಿ ನಿತ್ಯ ಶಾಲೆಗೆ ನಡೆದುಕೊಂಡು ಹೋಗಿ ಬರುತ್ತಿದ್ದಳು. 2015ರ ಫೆಬ್ರವರಿಯಲ್ಲಿ ಪಿ.ಜೆ.ಜೇಕಬ್ ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿ ಬಲಾತ್ಕಾರವಾಗಿ ಮನೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನದಿಗೆ ಹಾಕಿ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅನಂತರವೂ ಬಾಲಕಿ ಶಾಲೆಯಿಂದ ಮನೆಗೆ ಬರುವಾಗ ತಡೆದು ಪಕ್ಕದ ರಬ್ಬರ್ ತೋಟಕ್ಕೆ ಬಲಾತ್ಕಾರವಾಗಿ ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಎನ್‌ಎ ಪರೀಕ್ಷೆಯಲ್ಲಿ ಬಾಲಕಿಯ ಗರ್ಭಧಾರಣೆಗೆ ಪಿ.ಜೆ.ಜೇಕಬ್ ಕಾರಣ ಎಂಬುದು ದೃಢಪಟ್ಟಿತ್ತು. ಅಂದಿನ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 25

    ನ್ಯಾಯಾಧೀಶರು 14 ಸಾಕ್ಷಿಗಳನ್ನು ವಿಚಾರಣೆ ಮಾಡಿ, ಅಪರಾಧ ಸಾಬೀತಾಗಿದೆ ಎಂದು ಅ.22ರಂದು ತೀರ್ಪು ನೀಡಿದ್ದಾರೆ. ಶಿಕ್ಷೆ ಪ್ರಮಾಣವನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ(ಪೊಕ್ಸೋ) ವೆಂಕಟರಮಣ ಸ್ವಾಮಿ ಸಿ.ವಾದಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts