ಬೆಂಗಳೂರು: ಮೊನ್ನೆಯಷ್ಟೇ ಬಿಡುಗಡೆಯಾದ “ಕೋಲು ಮಂಡೆ ಜಂಗಮ ದೇವರು” ರ್ಯಾಪ್ ಸಾಂಗ್ ವಿವಾದ ಕಿಡಿ ಹೊತ್ತಿಸಿದ ಬೆನ್ನಲ್ಲೇ ರ್ಯಾಪರ್ ಚಂದನ್ ಶೆಟ್ಟಿ ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಮೊದಲಿಗೆ ಚಾಮರಾಜನಗರ ಜಾನಪದ ಕಲಾವಿದರಿಗೆ ಧನ್ಯವಾದ ತಿಳಿಸಿರುವ ಚಂದನ್, ಇದೇ ತಿಂಗಳ 22 ರಂದು ಯೂಟ್ಯೂಬ್ನಲ್ಲಿ ಕೋಲುಮಂಡೆ ಎಂಬ ಸಾಂಗ್ ಬಿಡುಗಡೆ ಮಾಡಿದ್ದೆ. ಈ ಸಾಂಗ್ ಎಲ್ಲೆಡೆಯಿಂದ ಅಭೂತಪೂರ್ವ ಪ್ರತಿಕ್ರಿಯೆ ಬರುತ್ತಿದೆ. ಯಾವುದೇ ವ್ಯಕ್ತಿ, ಜಾತಿ ಮತ್ತು ಧರ್ಮಕ್ಕೆ ಅವಮಾನ ಮಾಡಬೇಕೆಂಬ ಉದ್ದೇಶದಿಂದ ಸಾಂಗ್ ಮಾಡಿಲ್ಲ. ಒಳ್ಳೆಯ ಉದ್ದೇಶದಿಂದ ಸಾಂಗ್ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: VIDEO| ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ದಕ್ಷತೆ ಪಟ್ಟ ತಂದುಕೊಟ್ಟ ರೋಚಕ ಘಟನೆಗಳಿವು!
ಈಗಿನ ಪೀಳಿಗೆ ಮಕ್ಕಳಿಗೆ ಪ್ರಸ್ತುತ ಮ್ಯೂಸಿಕ್ ಅನ್ನು ಮಿಕ್ಸ್ ಮಾಡಿ ಇಂತಹ ಸಾಂಗ್ ಅನ್ನು ನೀಡಿದಾಗ ಅದನ್ನು ಮುಂದಿನ ಪೀಳಿಗೆಗೆ ಅವರು ಕೊಂಡೊಯ್ಯುತ್ತಾರೆ ಎಂಬ ನಿಟ್ಟಿನಿಲ್ಲಿ ಈ ಸಾಂಗ್ ಮಾಡಿದ್ದೇವೆ. ಈ ಹಾಡಿನಲ್ಲಿ ಬರುವ ಶಂಕಮ್ಮ ಪಾತ್ರಕ್ಕೆ ಅವಮಾನ ಮಾಡುವ ನಿಟ್ಟಿನಿಲ್ಲಿ ದೃಶ್ಯ ಚಿತ್ರೀಕರಣ ಮಾಡಿಲ್ಲ. ಏನಾದರೂ ತಪ್ಪಾಗಿದ್ದರೆ, ಅದು ನಮ್ಮ ಅರಿವೆ ಬರದೇ ಆಗಿರುತ್ತದೆ. ಹೀಗಾಗಿ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದಿದ್ದಾರೆ.
ನಮ್ಮ ಸಂಸ್ಕೃತಿಯಲ್ಲಿ ಯಾವೆಲ್ಲಾ ಕಲೆಯಿಂದ ಎಂದು ಸಾರುವ ಉದ್ದೇಶದಿಂದ ಈ ಸಾಂಗ್ ಮಾಡಿದೆ. ಇದಕ್ಕೆ ನಿಮ್ಮ ಸಹಕಾರ ಇರಲಿ. ಏನಾದರೂ ನಿಮಗೆ ಇದರಿಂದ ನೋವಾಗಿದ್ದರೆ ನಮ್ಮ ಇಡೀ ತಂಡದ ಪರವಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆಂದು ಚಂದನ್ ವಿಡಿಯೋ ಸಂದೇಶವನ್ನು ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಮಾದಪ್ಪನ ಗೀತೆಗೆ ಅಪಮಾನ: ಚಂದನ್ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!