ಸಿದ್ದಾಪುರದಲ್ಲಿ ಅಪರೂಪದ ಬಿಳಿ ಗೂಬೆ ಪ್ರತ್ಯಕ್ಷ

blank

ಸಿದ್ದಾಪುರ: ಇಲ್ಲಿನ ಕೃಷ್ಣ ಬೇಕರಿ ಮುಂಭಾಗ ಭಾನುವಾರ ರಾತ್ರಿ ಅಪರೂಪದ ಬಿಳಿ ಗೂಬೆಯೊಂದು ಪ್ರತ್ಯಕ್ಷವಾಗಿ ಎಲ್ಲರನ್ನು ಚಕಿತಗೊಳಿಸಿದೆ.

ಅಪರೂಪದ ಬಿಳಿ ಗೂಬೆಯೊಂದು ಸಿದ್ದಾಪುರದ ಕೃಷ್ಣ ಬೇಕರಿ ಮುಂಭಾಗ ಬಂದು ಕುಳಿತಿದೆ ಎಂಬ ವಿಷಯ ತಿಳಿದ ಜನರು ಅಂಗಡಿ ಮುಂದೆ ಜಮಾಯಿಸಿ ಕಣ್ತುಂಬಿಕೊಂಡರು. ಕೆಲವರು ಮೊಬೈಲ್‌ಗಳಲ್ಲಿ ಫೋಟೋ ಕ್ಲಿಕ್ಕಿಸಿದರೆ, ಮತ್ತೆ ಕೆಲವರು ಸೆಲ್ಫಿಗೆ ಮೊರೆ ಹೋದರು.

ಗೂಬೆಗಳ ಬಗ್ಗೆ ಅನೇಕ ನಂಬಿಕೆ ಹಾಗೂ ಮೂಢನಂಬಿಕೆಗಳಿವೆ. ಕೆಲವು ನಂಬಿಕೆಗಳು ಗೂಬೆಯನ್ನು ಶುಭವೆಂದು ಹೇಳಿದರೆ, ಇನ್ನೂ ಕೆಲವು ನಂಬಿಕೆ ಗೂಬೆಯನ್ನು ಅಶುಭದ ಸಂಕೇತವೆಂದು ಹೇಳುತ್ತದೆ. ಆದರೆ ಇವೆಲ್ಲದರ ಬಗ್ಗೆ ತಲೆಕೆಡಿಸಿಕೊಳ್ಳದ ಜನರು ಬಿಳಿ ಗೂಬೆ ಬಂದಿರುವ ವಿಚಾರ ಕೇಳಿ ಅದನ್ನು ನೋಡಲು ದೌಡಾಯಿಸಿ ಬಂದರು.
ಅಂಗಡಿ ಮಾಲೀಕ ಬಿಜು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿದ್ದಾರೆ. ವಲಯ ಅರಣ್ಯ ಅಧಿಕಾರಿ ಶಿವರಾಮ್, ಉಪ ವಲಯ ಅರಣ್ಯ ಅಧಿಕಾರಿ ಸಂಜಿತ್ ಸೋಮಯ್ಯ ಅವರ ಮಾರ್ಗದರ್ಶನದಲ್ಲಿ ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಗೂಬೆಯನ್ನು ವಶಕ್ಕೆ ಪಡೆದುಕೊಂಡು ಪಶುವೈದ್ಯರ ಬಳಿ ಗೂಬೆಯ ಆರೋಗ್ಯ ಪರಿಶೀಲಿಸಿ ನಂತರ ಮಾಲ್ದಾರೆ ಅರಣ್ಯದಲ್ಲಿ ಬಿಟ್ಟಿದ್ದಾರೆ.

ಪ್ರಾಣಿ, ಪಕ್ಷಿಗಳ ಮೇಲೆ ಕೆಲವರು ಮೂಢನಂಬಿಕೆ, ಅಪಪ್ರಚಾರ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಅಪರೂಪದ ಪ್ರಾಣಿ ಪಕ್ಷಿಗಳನ್ನು ಸಂರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಹಾಗಾಗಿ ಅಪರೂಪದ ಬಿಳಿ ಗೂಬೆಯನ್ನು ಕಾಡಿಗೆ ಬಿಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಮ್ ತಿಳಿಸಿದ್ದಾರೆ.

 

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…