ಬೆಂಗಳೂರು: ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಈ ಕುರಿತಾಗಿ ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಇದೆ ವಿಮಾನದಲ್ಲಿ ರಶ್ಮಿಕಾ ಜೊತೆಗೆ ಮತ್ತೊಬ್ಬ ನಟಿ ಶ್ರದ್ಧಾ ದಾಸ್ ಕೂಡ ಇದ್ದಿದ್ದರು. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. “ಇಂದು ನಾವು ಸಾವಿನಿಂದ ಪಾರಾಗಿದ್ದೇವೆ” ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ರಶ್ಮಿಕಾ ಈ ಪೋಸ್ಟ್ ವೈರಲ್ ಆಗಿದೆ. ನ್ಯಾಷನಲ್ ಕ್ರಶ್ ಪೋಸ್ಟ್ಗೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.
ಮೂಲಗಳ ಪ್ರಕಾರ, ರಶ್ಮಿಕಾ ಮತ್ತು ಶ್ರದ್ಧಾ ದಾಸ್ ಒಟ್ಟಿಗೆ ಪ್ರಯಾಣಿಸುತ್ತಿದ್ದರು. ವಿಮಾನವು ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣಿಸುತ್ತಿದೆಯಂತೆ, ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಟೇಕ್ ಆಫ್ ಆದ 30 ನಿಮಿಷಗಳ ನಂತರ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದೇ ವಿಷಯವನ್ನು ರಶ್ಮಿಕಾ ಪೋಸ್ಟ್ ಮಾಡಿದ್ದಾರೆ.
ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಮಾಡುವುದರಲ್ಲಿ ಬ್ಯುಸಿಯಾಗಿರುವ ಈ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅನಿಮಲ್ ಚಿತ್ರದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಗಳಿಸಿದ್ದಾರೆ. ಇಂದು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.