More

    ನಾನು ಮದ್ವೆಯಾದಾಗ ನನ್ನ ಪತಿ… ಅಭಿಮಾನಿಯ​ ಟ್ವೀಟ್​ಗೆ ರಶ್ಮಿಕಾ ಪ್ರತಿಕ್ರಿಯೆ ವೈರಲ್​

    ಮುಂಬೈ: ಪ್ರಸ್ತುತ ರಶ್ಮಿಕಾ ಮಂದಣ್ಣ ಅವರು ಅನಿಮಲ್​ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಸದ್ಯಕ್ಕೆ ಈ ವಿಚಾರ ಸೈಡಿಗಿರಲಿ. ಕಳೆದ ನಾಲ್ಕು ವರ್ಷಗಳಿಂದ ನಟ ವಿಜಯ್​ ದೇವರಕೊಂಡ ಮತ್ತು ಚರಿಷ್ಮಾ ಸುಂದರಿ ರಶ್ಮಿಕಾ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಈ ಬಗ್ಗೆ ಪ್ರಶ್ನಿಸಿದಾಗ ವಿಜಯ್​ ಆಗಲಿ, ರಶ್ಮಿಕಾ ಆಗಲಿ ಪ್ರತಿಕ್ರಿಯೆ ನೀಡದೇ ನಿರಾಕರಿಸುತ್ತಾರೆ. ಇಬ್ಬರು ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ವದಂತಿ ಇದ್ದರೂ ಸಹ ಇಬ್ಬರಲ್ಲಿ ಯಾರೊಬ್ಬರು ಸಹ ಇದನ್ನು ಈವರೆಗೂ ಖಚಿತಪಡಿಸಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ನಾವು ಬೆಸ್ಟ್​ ಫ್ರೆಂಡ್ಸ್​ ಎಂದಷ್ಟೇ ಹೇಳಿಕೊಂಡಿದ್ದಾರೆ.

    ಆದರೆ, ಅಭಿಮಾನಿಗಳು ಮಾತ್ರ ಇಬ್ಬರ ನಡುವೆ ಏನೋ ಇದೆ ಎಂದು ಮಾತನಾಡಿಕೊಳ್ಳುವುದನ್ನು ಮಾತ್ರ ನಿಲ್ಲಿಸಿಲ್ಲ. ಇತ್ತೀಚೆಗಷ್ಟೇ ಅಭಿಮಾನಿಯೊಬ್ಬ ರಶ್ಮಿಕಾ ಅವರ ಫೋಟೋವನ್ನು ಶೇರ್​ ಮಾಡಿಕೊಂಡು, ನೀವು ನಮ್ಮ ನ್ಯಾಷನಲ್​ ಕ್ರಶ್​ ಮೇಡಂ. ಒಂದು ದಿನ ನಾನು ನಿಮ್ಮ ರೀತಿಯ ಪತ್ನಿಯನ್ನು ಪಡೆಯುತ್ತೇನೆ ಎಂಬ ಭರವಸೆ ಇದೆ ಎಂದು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದ.

    ಅಭಿಮಾನಿಯ ಪೋಸ್ಟ್​ ರಶ್ಮಿಕಾ ಅವರ ಗಮನಕ್ಕೆ ಬಂದಿದ್ದು, ಪ್ರತಿಕ್ರಿಯೆ ನೀಡಿರುವ ಅವರು, ಅಹ್ಹಹಾ… ನಾನು ಮದುವೆಯಾದಾಗ ನನ್ನ ಪತಿ ನನ್ನನ್ನು ಅದ್ಭುತ ಹೆಂಡತಿ ಅಂದುಜಕೊಳ್ಳುತ್ತಾನೆಂದು ನಾನು ಕೂಡ ಭಾವಿಸುತ್ತೇನೆ ಎಂದಿದ್ದಾರೆ. ಪ್ರತಿನಿತ್ಯ ಸಾವಿರಾರು ಅಭಿಮಾನಿಗಳು ರಶ್ಮಿಕಾರಿಗೆ ಟ್ವೀಟ್​ ಮಾಡುತ್ತಾರೆ. ಅದರಲ್ಲಿ ಈ ಒಂದು ಪೋಸ್ಟ್​ಗೆ ರಶ್ಮಿಕಾ ಪ್ರತಿಕ್ರಿಯೆ ನೀಡಿರುವುದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

    ಇನ್ನು ಅನಿಮಲ್​ ಸಿನಿಮಾದ ಪ್ರಚಾರದ ವೇಳೆ ನಂದಮೂರಿ ಬಾಲಕೃಷ್ಣ ನಡೆಸಿಕೊಡುವ ಟಾಕ್ ಶೋನಲ್ಲಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ರಣಬೀರ್ ಮತ್ತು ರಶ್ಮಿಕಾ ಪಾಲ್ಗೊಂಡು ಸಿನಿಮಾದ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಸಂದೀಪ್ ರೆಡ್ಡಿ ನಿರ್ದೇಶನದ ‘ಅರ್ಜುನ್ ರೆಡ್ಡಿ’ ಮತ್ತು ‘ಅನಿಮಲ್’​ ಚಿತ್ರದ ಪೋಸ್ಟರ್​ಗಳನ್ನು ತೋರಿಸಿದರು. ಇದು ವಿಜಯ್ ದೇವರಕೊಂಡ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿತು. ಸಂದೀಪ್ ಹಾಗೂ ರಶ್ಮಿಕಾಗೆ ಪ್ರಶ್ನಿಸಿದ ಬಾಲಕೃಷ್ಣ, ‘ಅರ್ಜುನ್ ರೆಡ್ಡಿ’ ಮತ್ತು ‘ಅನಿಮಲ್’​ ನಡುವೆ ಯಾವುದನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಿದರು. ರಶ್ಮಿಕಾ ಮುಖ ನೋಡಿದ ರಣಬೀರ್, ತಮಾಷೆಯಾಗಿ ಗೇಲಿ ಮಾಡುತ್ತಾ, “ಯಾರು ಉತ್ತಮ ನಟ ಎಂದು ಭಾವಿಸುತ್ತೀರಿ? ರೀಲ್ ಹೀರೋ ಅಥವಾ ರಿಯಲ್ ಹೀರೋ” ಎಂದು ಹೇಳಿದರು. ಈ ಪ್ರಶ್ನೆಗೆ ರಶ್ಮಿಕಾ ಉತ್ತರಿಸಲು ನಿರಾಕರಿಸಿದರು.

    ಕೂಡಲೇ ವಿಜಯ್​ಗೆ ಕರೆ ಮಾಡಿ ಸಂದೀಪ್​ ಎಂದ ಬಾಲಕೃಷ್ಣ, ವಿಜಯ್​ ದೇವರಕೊಂಡಗೆ ಕಾಲ್ ಮಾಡಿಸಿದರು. ಆದ್ರೆ, ಆ ಸಮಯಕ್ಕೆ ಅವರು ಕರೆ ಸ್ವೀಕರಿಸಿಲ್ಲ. ಆಗ ರಣಬೀರ್ ತಮಾಷೆಯಾಗಿ, “ಸರ್, ರಶ್ಮಿಕಾ ಕರೆ ಮಾಡಲಿ, ಸಂದೀಪ್ ಕರೆಯನ್ನು ಅವರು ಎತ್ತುವುದಿಲ್ಲ” ಎಂದು ಹೇಳಿದರು. ತಕ್ಷಣ ಮುಗುಳುನಗೆ ಚೆಲ್ಲಿದ ರಶ್ಮಿಕಾಗೆ ರಣಬೀರ್ ಫೋನ್‌ ಮಾಡುವಂತೆ ಒತ್ತಾಯಿಸಿದರು. ತದನಂತರ ವಿಜಯ್​ಗೆ ಕರೆ ಮಾಡಿದ್ದಾರೆ. ಆದ್ರೆ, ಅವರು ಕರೆ ಸ್ವೀಕರಿಸಲಿಲ್ಲ. ಬಳಿಕ ಫೋನ್​ ಮಾಡಿದ ದೇವರಕೊಂಡ ಅವರನ್ನು ಮಾತನಾಡಿಸಿದ ರಶ್ಮಿಕಾ, ಕೆಲ ಸಮಯ ಸಂಭಾಷಣೆ ನಡೆಸಿದರು. ಇದೇ ವಿಷಯವನ್ನು ಮುಂದಿಟ್ಟು ಕಾರ್ಯಕ್ರಮದಲ್ಲಿ ರಣಬೀರ್​-ಸಂದೀಪ್​ ಮತ್ತು ಬಾಲಕೃಷ್ಣ ಅವರು ರಶ್ಮಿಕಾ ಕಾಲೆಳೆದರು. (ಏಜೆನ್ಸೀಸ್)

    ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ ಆಶಾ!

    ತಿರುಪತಿಯಲ್ಲಿ ಲಡ್ಡು ಪ್ರಸಾದ, ಆದ್ರೆ ಅಯೋಧ್ಯೆ ಶ್ರೀರಾಮನ ಭಕ್ತರಿಗೆ ಏನನ್ನು ನೀಡಲಿದ್ದಾರೆ ಗೊತ್ತಾ..?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts