More

    ಕೊಲ್ಲೂರಿನಲ್ಲಿ ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ: ತೇರು ಎಳೆದು ಸಂಭ್ರಮಿಸಿದ ಸಹಸ್ರಾರು ಭಕ್ತರು

    ವಿಜಯವಾಣಿ ಸುದ್ದಿಜಾಲ ಕೊಲ್ಲೂರು
    ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಶ್ರೀಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು.

    ಬೆಳಗ್ಗೆ ದೇವಳದ ತಂತ್ರಿ, ಪ್ರಧಾನ ಅರ್ಚಕ ಡಾ.ಕೆ.ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಮುಹೂರ್ತ ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆದವು. ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಮಧ್ಯಾಹ್ನ ದೇವಳದ ಭೋಜನಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು.

    ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾರ್ಗದರ್ಶನದಲ್ಲಿ ದೇವಳದ ಆಡಳಿತಾಧಿಕಾರಿ, ಕುಂದಾಪುರ ಉಪವಿಭಾಧಿಕಾರಿ ರಶ್ಮಿ ಎಸ್.ಆರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಅರ್ಚಕರು, ದೇವಳದ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ಜಾತ್ರೆಯ ಯಶಸ್ಸಿಗೆ ಸಹಕರಿಸಿದ್ದರು.

    ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವಂತೆ ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ, ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ ನೇತೃತ್ವದಲ್ಲಿ, ಕೊಲ್ಲೂರು ಠಾಣಾಧಿಕಾರಿ ಜಯಶ್ರೀ ಹೊನ್ನೂರು ಮತ್ತು ಸುಧಾರಾಣಿ ನೇತೃತ್ವದಲ್ಲಿ, ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ದಾರಿಯುದ್ದಕ್ಕೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಅಲ್ಲದೆ ಕಳೆದ ಹತ್ತು ದಿನಗಳಿಂದ ರಾಜ್ಯ-ಹೊರರಾಜ್ಯದ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಮಠಾಧೀಶರು, ಕಲಾವಿದರು, ಜನಪ್ರತಿನಿಧಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.

    ಅವಭೃತ ಸ್ನಾನ

    ಮಂಗಳವಾರ ರಾತ್ರಿ ದೇವರ ಅವಭೃತಸ್ನಾನ ನಡೆಯಲಿದೆ. ಬುಧವಾರ ಬೆಳಗ್ಗೆ ಮಹಾಪೂರ್ಣಾಹುತಿ, ಧ್ವಜಾವರೋಹಣ, ಪೂರ್ಣಕುಂಭಾಭಿಷೇಕದ ನಂತರ ಪ್ರಸಾದ ವಿತರಿಸಲಾಗುತ್ತದೆ.

    ಕೊಲ್ಲೂರಿನಲ್ಲಿ ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ: ತೇರು ಎಳೆದು ಸಂಭ್ರಮಿಸಿದ ಸಹಸ್ರಾರು ಭಕ್ತರು

    ವಿದ್ಯುದ್ದೀಪಾಲಂಕಾರದಿಂದ ಶೋಭಿಸಿದ ಕೊಲ್ಲೂರು

    ಕೊಲ್ಲೂರು ಕ್ಷೇತ್ರದ ಅಧಿದೇವತೆ ಹಾಗೂ ಗ್ರಾಮದೇವತೆ ಶ್ರೀ ಮೂಕಾಂಬಿಕಾ ಅಮ್ಮನವರ ರಥೋತ್ಸವಕ್ಕೆ ಮಾ.25ರಂದು ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ಊರಿನವರು, ಭಕ್ತರು ಸೇರಿ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts