ಕೊಲ್ಲೂರಿನಲ್ಲಿ ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ: ತೇರು ಎಳೆದು ಸಂಭ್ರಮಿಸಿದ ಸಹಸ್ರಾರು ಭಕ್ತರು

ವಿಜಯವಾಣಿ ಸುದ್ದಿಜಾಲ ಕೊಲ್ಲೂರುದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಶ್ರೀಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ದೇವಳದ ತಂತ್ರಿ, ಪ್ರಧಾನ ಅರ್ಚಕ ಡಾ.ಕೆ.ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಮುಹೂರ್ತ ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆದವು. ವಿವಿಧ ಭಾಗಗಳಿಂದ ಕ್ಷೇತ್ರಕ್ಕೆ ಆಗಮಿಸಿದ ಸಹಸ್ರಾರು ಭಕ್ತರು ಮಧ್ಯಾಹ್ನ ದೇವಳದ ಭೋಜನಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ರಥ … Continue reading ಕೊಲ್ಲೂರಿನಲ್ಲಿ ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ: ತೇರು ಎಳೆದು ಸಂಭ್ರಮಿಸಿದ ಸಹಸ್ರಾರು ಭಕ್ತರು