ಪಡಿತರ ಅಕ್ಕಿ ಮಾರಾಟ ಮಾಡಿ ಸಿಕ್ಕಿಬಿದ್ದರೆ 6 ತಿಂಗಳು ಕಾರ್ಡ್ ಸಸ್ಪೆಂಡ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ಸಸ್ಪೆಂಡ್ ಆಗಲಿವೆ. ಹೌದು, ಆಹಾರ ಇಲಾಖೆಯು ಕಾಳದಂಧೆಯಲ್ಲಿ ಪಡಿತರ ಮಾರಾಟ ತಡೆಯಲು ಇಂಥ ಆದೇಶ ತಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ವಿತರಿಸುವ ಅಕ್ಕಿಯನ್ನು ಕಾರ್ಡ್‌ದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ … Continue reading ಪಡಿತರ ಅಕ್ಕಿ ಮಾರಾಟ ಮಾಡಿ ಸಿಕ್ಕಿಬಿದ್ದರೆ 6 ತಿಂಗಳು ಕಾರ್ಡ್ ಸಸ್ಪೆಂಡ್