More

    ರವಿ ಬೆಳಗೆರೆ ನಿಧನ; ಪ್ರಾರ್ಥನಾ ಶಾಲಾ ಆವರಣದಲ್ಲಿ 9 ಗಂಟೆ ಬಳಿಕ ಸಾರ್ವಜನಿಕ ಅಂತಿಮ ದರ್ಶನ…

    ಬೆಂಗಳೂರು: ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.

    ಪ್ರಾರ್ಥನಾ ಶಾಲೆ ಆವರಣಲ್ಲಿ ಅಂತಿಮ ಸಂಸ್ಕಾರ ಮಾಡುವ ಇಚ್ಛೆ ಕುಟುಂಬಸ್ಥರಲ್ಲಿ ಇತ್ತು. ಆದರೆ ವಸತಿ ಪ್ರದೇಶವಾದ್ದರಿಂದ ಅಲ್ಲಿ ಅಗ್ನಿಸ್ಪರ್ಶ ಮಾಡಲು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರಿಂದ ಬನಶಂಕರಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

    ರವಿ ಬೆಳಗೆರೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವುದರಿಂದ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 9ರ ಬಳಿಕ ಬೆಂಗಳೂರಿನ ಪದ್ಮನಾಭನಗರದ ಪ್ರಾರ್ಥನಾ ಶಾಲೆಯ ಆವರಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಆಪ್ತ ಮೂಲಗಳು ತಿಳಿಸಿವೆ.

    ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಇನ್ನಿಲ್ಲ

    ಬದುಕಿಡೀ ಬರೆದ ರವಿ ಬೆಳಗೆರೆ; ಬರೆಯುತ್ತಲೇ ಬದುಕು ಮುಗಿಸಿದರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts